Featured

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ! ನೇಮಕಾತಿ ಹೆಚ್ಚಳ

ಹೊಸದಿಲ್ಲಿ: ಉದ್ಯೋಗಾಕಾಂಕ್ಷಿಗಳಿಗೆ ಇದು ಸಿಹಿ ಸುದ್ದಿ! ಭಾರತದಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ ಈಗ ಉದ್ಯೋಗಾವಕಾಶಗಳು ಸೃಷ್ಟಿಯಾಗಿದ್ದು, ಕಂಪನಿಗಳಿಂದ ನೇಮಕಾತಿ ಚುರುಕಾಗಿವೆ. ಪ್ರಸಕ್ತ ಸಾಲಿನ ಮೊದಲಾರ್ಧದಲ್ಲಿ ಗಣನೀಯ ಸಂಖ್ಯೆಯಲ್ಲಿ ಕಂಪನಿಗಳು ಉದ್ಯೋಗಿಗಳ ಸೇರ್ಪಡೆಗೆ ಮುಂದಾಗಿವೆ ಎಂದು ಇತ್ತೀಚಿನ ಸಮೀಕ್ಷೆ ತಿಳಿಸಿದೆ.

ಟೀಮ್‌ಲೀಸ್‌ ಸಂಸ್ಥೆ ಸಿದ್ಧಪಡಿಸಿದ ಸಮೀಕ್ಷಾ ವರದಿಯ ಪ್ರಕಾರ ಕಳೆದ ವರ್ಷದ ಏಪ್ರಿಲ್‌-ಸೆಪ್ಟೆಂಬರ್‌ ಅವಧಿಯಲ್ಲಿ ನಿವ್ವಳ ಉದ್ಯೋಗ ಸೃಷ್ಟಿಯಲ್ಲಿ ಹೆಚ್ಚಳವಾಗಿತ್ತು. ಉದ್ಯೋಗಾವಕಾಶಗಳ ಮುನ್ನೋಟ ಕೂಡ ಅಶಾದಾಯಕವಾಗಿದೆ. ಇದು ಆರೋಗ್ಯಕರ ಆರ್ಥಿಕ ಬೆಳವಣಿಗೆಯನ್ನು ಬಿಂಬಿಸಿದೆ.

ಕೆಪಿಒ, ಇ-ಕಾಮರ್ಸ್‌, ತಂತ್ರಜ್ಞಾನ ಆಧಾರಿತ ಸ್ಟಾರ್ಟಪ್‌, ಹಣಕಾಸು ಸೇವೆ, ಮಾಧ್ಯಮ ಮತ್ತು ಮನರಂಜನೆ, ರಿಟೇಲ್‌ , ಬಿಪಿಒ, ಎಫ್‌ಎಂಸಿಜಿ, ನಿರ್ಮಾಣ, ರಿಯಾಲ್ಟಿ ವಲಯದಲ್ಲಿ ಉದ್ಯೋಗ ಸೃಷ್ಟಿ ಏರಿಕೆಯಾಗಿದೆ. ವಿದ್ಯುತ್‌ ಮತ್ತಿ ಇಂಧನ ವಲಯದಲ್ಲಿ ತಟಸ್ಥವಾಗಿದ್ದರೆ, ಕೃಷಿ, ಕೃಷಿ ರಾಸಾಯನಿಕ, ದೂರಸಂಪರ್ಕ, ಆರೋಗ್ಯ, ಔಷಧ, ಶಿಕ್ಷಣ, ಉತ್ಪಾದನೆ, ಎಂಜಿನಿಯರಿಂಗ್‌, ಟ್ರಾವೆಲ್ಸ್‌, ಹೋಟೆಲ್‌ ವಲಯದಲ್ಲಿ ತುಸು ಇಳಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಉದ್ಯೋಗ ಸೃಷ್ಟಿಯಲ್ಲಿ ಮುಂಬಯಿ ಮತ್ತು ದಿಲ್ಲಿ ಮುಂಚೂಣಿಯಲ್ಲಿದ್ದರೆ, ಬೆಂಗಳೂರು, ಹೈದರಾಬಾದ್‌, ಪುಣೆ ನಂತರದ ಸ್ಥಾನಗಳಲ್ಲಿವೆ. ಕೋಲ್ಕೊತಾ, ಅಹಮದಾಬಾದ್‌ನಲ್ಲಿ ಅಲ್ಪ ಇಳಿಕೆ ಕಂಡು ಬಂದಿದೆ.

ಒಟ್ಟು 695 ಸಣ್ಣ, ಮಧ್ಯಮ ಮತ್ತು ಭಾರಿ ಕಂಪನಿಗಳನ್ನು ಸಂದರ್ಶಿಸಿ ಈ ಸಮೀಕ್ಷೆ ಸಿದ್ಧಪಡಿಸಲಾಗಿದೆ ಎಂದು ಟೀಮ್‌ಲೀಸ್‌ ತಿಳಿಸಿದೆ

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago