Featured

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ! ನೇಮಕಾತಿ ಹೆಚ್ಚಳ

ಹೊಸದಿಲ್ಲಿ: ಉದ್ಯೋಗಾಕಾಂಕ್ಷಿಗಳಿಗೆ ಇದು ಸಿಹಿ ಸುದ್ದಿ! ಭಾರತದಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ ಈಗ ಉದ್ಯೋಗಾವಕಾಶಗಳು ಸೃಷ್ಟಿಯಾಗಿದ್ದು, ಕಂಪನಿಗಳಿಂದ ನೇಮಕಾತಿ ಚುರುಕಾಗಿವೆ. ಪ್ರಸಕ್ತ ಸಾಲಿನ ಮೊದಲಾರ್ಧದಲ್ಲಿ ಗಣನೀಯ ಸಂಖ್ಯೆಯಲ್ಲಿ ಕಂಪನಿಗಳು ಉದ್ಯೋಗಿಗಳ ಸೇರ್ಪಡೆಗೆ ಮುಂದಾಗಿವೆ ಎಂದು ಇತ್ತೀಚಿನ ಸಮೀಕ್ಷೆ ತಿಳಿಸಿದೆ.

ಟೀಮ್‌ಲೀಸ್‌ ಸಂಸ್ಥೆ ಸಿದ್ಧಪಡಿಸಿದ ಸಮೀಕ್ಷಾ ವರದಿಯ ಪ್ರಕಾರ ಕಳೆದ ವರ್ಷದ ಏಪ್ರಿಲ್‌-ಸೆಪ್ಟೆಂಬರ್‌ ಅವಧಿಯಲ್ಲಿ ನಿವ್ವಳ ಉದ್ಯೋಗ ಸೃಷ್ಟಿಯಲ್ಲಿ ಹೆಚ್ಚಳವಾಗಿತ್ತು. ಉದ್ಯೋಗಾವಕಾಶಗಳ ಮುನ್ನೋಟ ಕೂಡ ಅಶಾದಾಯಕವಾಗಿದೆ. ಇದು ಆರೋಗ್ಯಕರ ಆರ್ಥಿಕ ಬೆಳವಣಿಗೆಯನ್ನು ಬಿಂಬಿಸಿದೆ.

ಕೆಪಿಒ, ಇ-ಕಾಮರ್ಸ್‌, ತಂತ್ರಜ್ಞಾನ ಆಧಾರಿತ ಸ್ಟಾರ್ಟಪ್‌, ಹಣಕಾಸು ಸೇವೆ, ಮಾಧ್ಯಮ ಮತ್ತು ಮನರಂಜನೆ, ರಿಟೇಲ್‌ , ಬಿಪಿಒ, ಎಫ್‌ಎಂಸಿಜಿ, ನಿರ್ಮಾಣ, ರಿಯಾಲ್ಟಿ ವಲಯದಲ್ಲಿ ಉದ್ಯೋಗ ಸೃಷ್ಟಿ ಏರಿಕೆಯಾಗಿದೆ. ವಿದ್ಯುತ್‌ ಮತ್ತಿ ಇಂಧನ ವಲಯದಲ್ಲಿ ತಟಸ್ಥವಾಗಿದ್ದರೆ, ಕೃಷಿ, ಕೃಷಿ ರಾಸಾಯನಿಕ, ದೂರಸಂಪರ್ಕ, ಆರೋಗ್ಯ, ಔಷಧ, ಶಿಕ್ಷಣ, ಉತ್ಪಾದನೆ, ಎಂಜಿನಿಯರಿಂಗ್‌, ಟ್ರಾವೆಲ್ಸ್‌, ಹೋಟೆಲ್‌ ವಲಯದಲ್ಲಿ ತುಸು ಇಳಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಉದ್ಯೋಗ ಸೃಷ್ಟಿಯಲ್ಲಿ ಮುಂಬಯಿ ಮತ್ತು ದಿಲ್ಲಿ ಮುಂಚೂಣಿಯಲ್ಲಿದ್ದರೆ, ಬೆಂಗಳೂರು, ಹೈದರಾಬಾದ್‌, ಪುಣೆ ನಂತರದ ಸ್ಥಾನಗಳಲ್ಲಿವೆ. ಕೋಲ್ಕೊತಾ, ಅಹಮದಾಬಾದ್‌ನಲ್ಲಿ ಅಲ್ಪ ಇಳಿಕೆ ಕಂಡು ಬಂದಿದೆ.

ಒಟ್ಟು 695 ಸಣ್ಣ, ಮಧ್ಯಮ ಮತ್ತು ಭಾರಿ ಕಂಪನಿಗಳನ್ನು ಸಂದರ್ಶಿಸಿ ಈ ಸಮೀಕ್ಷೆ ಸಿದ್ಧಪಡಿಸಲಾಗಿದೆ ಎಂದು ಟೀಮ್‌ಲೀಸ್‌ ತಿಳಿಸಿದೆ

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 day ago