ಹೊಸದಿಲ್ಲಿ: ಉದ್ಯೋಗಾಕಾಂಕ್ಷಿಗಳಿಗೆ ಇದು ಸಿಹಿ ಸುದ್ದಿ! ಭಾರತದಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ ಈಗ ಉದ್ಯೋಗಾವಕಾಶಗಳು ಸೃಷ್ಟಿಯಾಗಿದ್ದು, ಕಂಪನಿಗಳಿಂದ ನೇಮಕಾತಿ ಚುರುಕಾಗಿವೆ. ಪ್ರಸಕ್ತ ಸಾಲಿನ ಮೊದಲಾರ್ಧದಲ್ಲಿ ಗಣನೀಯ ಸಂಖ್ಯೆಯಲ್ಲಿ ಕಂಪನಿಗಳು ಉದ್ಯೋಗಿಗಳ ಸೇರ್ಪಡೆಗೆ ಮುಂದಾಗಿವೆ ಎಂದು ಇತ್ತೀಚಿನ ಸಮೀಕ್ಷೆ ತಿಳಿಸಿದೆ.
ಟೀಮ್ಲೀಸ್ ಸಂಸ್ಥೆ ಸಿದ್ಧಪಡಿಸಿದ ಸಮೀಕ್ಷಾ ವರದಿಯ ಪ್ರಕಾರ ಕಳೆದ ವರ್ಷದ ಏಪ್ರಿಲ್-ಸೆಪ್ಟೆಂಬರ್ ಅವಧಿಯಲ್ಲಿ ನಿವ್ವಳ ಉದ್ಯೋಗ ಸೃಷ್ಟಿಯಲ್ಲಿ ಹೆಚ್ಚಳವಾಗಿತ್ತು. ಉದ್ಯೋಗಾವಕಾಶಗಳ ಮುನ್ನೋಟ ಕೂಡ ಅಶಾದಾಯಕವಾಗಿದೆ. ಇದು ಆರೋಗ್ಯಕರ ಆರ್ಥಿಕ ಬೆಳವಣಿಗೆಯನ್ನು ಬಿಂಬಿಸಿದೆ.
ಕೆಪಿಒ, ಇ-ಕಾಮರ್ಸ್, ತಂತ್ರಜ್ಞಾನ ಆಧಾರಿತ ಸ್ಟಾರ್ಟಪ್, ಹಣಕಾಸು ಸೇವೆ, ಮಾಧ್ಯಮ ಮತ್ತು ಮನರಂಜನೆ, ರಿಟೇಲ್ , ಬಿಪಿಒ, ಎಫ್ಎಂಸಿಜಿ, ನಿರ್ಮಾಣ, ರಿಯಾಲ್ಟಿ ವಲಯದಲ್ಲಿ ಉದ್ಯೋಗ ಸೃಷ್ಟಿ ಏರಿಕೆಯಾಗಿದೆ. ವಿದ್ಯುತ್ ಮತ್ತಿ ಇಂಧನ ವಲಯದಲ್ಲಿ ತಟಸ್ಥವಾಗಿದ್ದರೆ, ಕೃಷಿ, ಕೃಷಿ ರಾಸಾಯನಿಕ, ದೂರಸಂಪರ್ಕ, ಆರೋಗ್ಯ, ಔಷಧ, ಶಿಕ್ಷಣ, ಉತ್ಪಾದನೆ, ಎಂಜಿನಿಯರಿಂಗ್, ಟ್ರಾವೆಲ್ಸ್, ಹೋಟೆಲ್ ವಲಯದಲ್ಲಿ ತುಸು ಇಳಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಉದ್ಯೋಗ ಸೃಷ್ಟಿಯಲ್ಲಿ ಮುಂಬಯಿ ಮತ್ತು ದಿಲ್ಲಿ ಮುಂಚೂಣಿಯಲ್ಲಿದ್ದರೆ, ಬೆಂಗಳೂರು, ಹೈದರಾಬಾದ್, ಪುಣೆ ನಂತರದ ಸ್ಥಾನಗಳಲ್ಲಿವೆ. ಕೋಲ್ಕೊತಾ, ಅಹಮದಾಬಾದ್ನಲ್ಲಿ ಅಲ್ಪ ಇಳಿಕೆ ಕಂಡು ಬಂದಿದೆ.
ಒಟ್ಟು 695 ಸಣ್ಣ, ಮಧ್ಯಮ ಮತ್ತು ಭಾರಿ ಕಂಪನಿಗಳನ್ನು ಸಂದರ್ಶಿಸಿ ಈ ಸಮೀಕ್ಷೆ ಸಿದ್ಧಪಡಿಸಲಾಗಿದೆ ಎಂದು ಟೀಮ್ಲೀಸ್ ತಿಳಿಸಿದೆ
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…