Featured

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ! ನೇಮಕಾತಿ ಹೆಚ್ಚಳ

ಹೊಸದಿಲ್ಲಿ: ಉದ್ಯೋಗಾಕಾಂಕ್ಷಿಗಳಿಗೆ ಇದು ಸಿಹಿ ಸುದ್ದಿ! ಭಾರತದಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ ಈಗ ಉದ್ಯೋಗಾವಕಾಶಗಳು ಸೃಷ್ಟಿಯಾಗಿದ್ದು, ಕಂಪನಿಗಳಿಂದ ನೇಮಕಾತಿ ಚುರುಕಾಗಿವೆ. ಪ್ರಸಕ್ತ ಸಾಲಿನ ಮೊದಲಾರ್ಧದಲ್ಲಿ ಗಣನೀಯ ಸಂಖ್ಯೆಯಲ್ಲಿ ಕಂಪನಿಗಳು ಉದ್ಯೋಗಿಗಳ ಸೇರ್ಪಡೆಗೆ ಮುಂದಾಗಿವೆ ಎಂದು ಇತ್ತೀಚಿನ ಸಮೀಕ್ಷೆ ತಿಳಿಸಿದೆ.

ಟೀಮ್‌ಲೀಸ್‌ ಸಂಸ್ಥೆ ಸಿದ್ಧಪಡಿಸಿದ ಸಮೀಕ್ಷಾ ವರದಿಯ ಪ್ರಕಾರ ಕಳೆದ ವರ್ಷದ ಏಪ್ರಿಲ್‌-ಸೆಪ್ಟೆಂಬರ್‌ ಅವಧಿಯಲ್ಲಿ ನಿವ್ವಳ ಉದ್ಯೋಗ ಸೃಷ್ಟಿಯಲ್ಲಿ ಹೆಚ್ಚಳವಾಗಿತ್ತು. ಉದ್ಯೋಗಾವಕಾಶಗಳ ಮುನ್ನೋಟ ಕೂಡ ಅಶಾದಾಯಕವಾಗಿದೆ. ಇದು ಆರೋಗ್ಯಕರ ಆರ್ಥಿಕ ಬೆಳವಣಿಗೆಯನ್ನು ಬಿಂಬಿಸಿದೆ.

ಕೆಪಿಒ, ಇ-ಕಾಮರ್ಸ್‌, ತಂತ್ರಜ್ಞಾನ ಆಧಾರಿತ ಸ್ಟಾರ್ಟಪ್‌, ಹಣಕಾಸು ಸೇವೆ, ಮಾಧ್ಯಮ ಮತ್ತು ಮನರಂಜನೆ, ರಿಟೇಲ್‌ , ಬಿಪಿಒ, ಎಫ್‌ಎಂಸಿಜಿ, ನಿರ್ಮಾಣ, ರಿಯಾಲ್ಟಿ ವಲಯದಲ್ಲಿ ಉದ್ಯೋಗ ಸೃಷ್ಟಿ ಏರಿಕೆಯಾಗಿದೆ. ವಿದ್ಯುತ್‌ ಮತ್ತಿ ಇಂಧನ ವಲಯದಲ್ಲಿ ತಟಸ್ಥವಾಗಿದ್ದರೆ, ಕೃಷಿ, ಕೃಷಿ ರಾಸಾಯನಿಕ, ದೂರಸಂಪರ್ಕ, ಆರೋಗ್ಯ, ಔಷಧ, ಶಿಕ್ಷಣ, ಉತ್ಪಾದನೆ, ಎಂಜಿನಿಯರಿಂಗ್‌, ಟ್ರಾವೆಲ್ಸ್‌, ಹೋಟೆಲ್‌ ವಲಯದಲ್ಲಿ ತುಸು ಇಳಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಉದ್ಯೋಗ ಸೃಷ್ಟಿಯಲ್ಲಿ ಮುಂಬಯಿ ಮತ್ತು ದಿಲ್ಲಿ ಮುಂಚೂಣಿಯಲ್ಲಿದ್ದರೆ, ಬೆಂಗಳೂರು, ಹೈದರಾಬಾದ್‌, ಪುಣೆ ನಂತರದ ಸ್ಥಾನಗಳಲ್ಲಿವೆ. ಕೋಲ್ಕೊತಾ, ಅಹಮದಾಬಾದ್‌ನಲ್ಲಿ ಅಲ್ಪ ಇಳಿಕೆ ಕಂಡು ಬಂದಿದೆ.

ಒಟ್ಟು 695 ಸಣ್ಣ, ಮಧ್ಯಮ ಮತ್ತು ಭಾರಿ ಕಂಪನಿಗಳನ್ನು ಸಂದರ್ಶಿಸಿ ಈ ಸಮೀಕ್ಷೆ ಸಿದ್ಧಪಡಿಸಲಾಗಿದೆ ಎಂದು ಟೀಮ್‌ಲೀಸ್‌ ತಿಳಿಸಿದೆ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago