Featured

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ! ನೇಮಕಾತಿ ಹೆಚ್ಚಳ

ಹೊಸದಿಲ್ಲಿ: ಉದ್ಯೋಗಾಕಾಂಕ್ಷಿಗಳಿಗೆ ಇದು ಸಿಹಿ ಸುದ್ದಿ! ಭಾರತದಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ ಈಗ ಉದ್ಯೋಗಾವಕಾಶಗಳು ಸೃಷ್ಟಿಯಾಗಿದ್ದು, ಕಂಪನಿಗಳಿಂದ ನೇಮಕಾತಿ ಚುರುಕಾಗಿವೆ. ಪ್ರಸಕ್ತ ಸಾಲಿನ ಮೊದಲಾರ್ಧದಲ್ಲಿ ಗಣನೀಯ ಸಂಖ್ಯೆಯಲ್ಲಿ ಕಂಪನಿಗಳು ಉದ್ಯೋಗಿಗಳ ಸೇರ್ಪಡೆಗೆ ಮುಂದಾಗಿವೆ ಎಂದು ಇತ್ತೀಚಿನ ಸಮೀಕ್ಷೆ ತಿಳಿಸಿದೆ.

ಟೀಮ್‌ಲೀಸ್‌ ಸಂಸ್ಥೆ ಸಿದ್ಧಪಡಿಸಿದ ಸಮೀಕ್ಷಾ ವರದಿಯ ಪ್ರಕಾರ ಕಳೆದ ವರ್ಷದ ಏಪ್ರಿಲ್‌-ಸೆಪ್ಟೆಂಬರ್‌ ಅವಧಿಯಲ್ಲಿ ನಿವ್ವಳ ಉದ್ಯೋಗ ಸೃಷ್ಟಿಯಲ್ಲಿ ಹೆಚ್ಚಳವಾಗಿತ್ತು. ಉದ್ಯೋಗಾವಕಾಶಗಳ ಮುನ್ನೋಟ ಕೂಡ ಅಶಾದಾಯಕವಾಗಿದೆ. ಇದು ಆರೋಗ್ಯಕರ ಆರ್ಥಿಕ ಬೆಳವಣಿಗೆಯನ್ನು ಬಿಂಬಿಸಿದೆ.

ಕೆಪಿಒ, ಇ-ಕಾಮರ್ಸ್‌, ತಂತ್ರಜ್ಞಾನ ಆಧಾರಿತ ಸ್ಟಾರ್ಟಪ್‌, ಹಣಕಾಸು ಸೇವೆ, ಮಾಧ್ಯಮ ಮತ್ತು ಮನರಂಜನೆ, ರಿಟೇಲ್‌ , ಬಿಪಿಒ, ಎಫ್‌ಎಂಸಿಜಿ, ನಿರ್ಮಾಣ, ರಿಯಾಲ್ಟಿ ವಲಯದಲ್ಲಿ ಉದ್ಯೋಗ ಸೃಷ್ಟಿ ಏರಿಕೆಯಾಗಿದೆ. ವಿದ್ಯುತ್‌ ಮತ್ತಿ ಇಂಧನ ವಲಯದಲ್ಲಿ ತಟಸ್ಥವಾಗಿದ್ದರೆ, ಕೃಷಿ, ಕೃಷಿ ರಾಸಾಯನಿಕ, ದೂರಸಂಪರ್ಕ, ಆರೋಗ್ಯ, ಔಷಧ, ಶಿಕ್ಷಣ, ಉತ್ಪಾದನೆ, ಎಂಜಿನಿಯರಿಂಗ್‌, ಟ್ರಾವೆಲ್ಸ್‌, ಹೋಟೆಲ್‌ ವಲಯದಲ್ಲಿ ತುಸು ಇಳಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಉದ್ಯೋಗ ಸೃಷ್ಟಿಯಲ್ಲಿ ಮುಂಬಯಿ ಮತ್ತು ದಿಲ್ಲಿ ಮುಂಚೂಣಿಯಲ್ಲಿದ್ದರೆ, ಬೆಂಗಳೂರು, ಹೈದರಾಬಾದ್‌, ಪುಣೆ ನಂತರದ ಸ್ಥಾನಗಳಲ್ಲಿವೆ. ಕೋಲ್ಕೊತಾ, ಅಹಮದಾಬಾದ್‌ನಲ್ಲಿ ಅಲ್ಪ ಇಳಿಕೆ ಕಂಡು ಬಂದಿದೆ.

ಒಟ್ಟು 695 ಸಣ್ಣ, ಮಧ್ಯಮ ಮತ್ತು ಭಾರಿ ಕಂಪನಿಗಳನ್ನು ಸಂದರ್ಶಿಸಿ ಈ ಸಮೀಕ್ಷೆ ಸಿದ್ಧಪಡಿಸಲಾಗಿದೆ ಎಂದು ಟೀಮ್‌ಲೀಸ್‌ ತಿಳಿಸಿದೆ

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

59 seconds ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

10 minutes ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

20 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

22 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

22 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

23 hours ago