Featured

ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ 12 ದಿನ ವೇತನ ಸಹಿತ ಋತುಚಕ್ರದ ರಜೆ : ರಾಜ್ಯ ಸರಕಾರ ಆದೇಶ – vishwanews24

ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ 12 ದಿನ ವೇತನ ಸಹಿತ ಋತುಚಕ್ರದ ರಜೆ : ರಾಜ್ಯ ಸರಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸಬೇಕು ಎಂದು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ.

ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, ತೋಟ ಕಾರ್ಮಿಕರ ಕಾಯ್ದೆ, ಬೀಡಿ ಮತ್ತು ಸಿಗಾರ್‌ ಕಾರ್ಮಿಕರ ಕಾಯ್ದೆ, ಮೋಟಾರು ಸಾರಿಗೆ ಕಾಯ್ದೆ ಅಡಿಯಲ್ಲಿ ನೋಂದಣಿ ಆಗಿರುವ ಕೈಗಾರಿಕೆಗಳು ಮತ್ತು ಸಂಸ್ಥೆಗಳೂ ಸೇರಿದಂತೆ ಎಲ್ಲ ವಲಯಗಳಲ್ಲಿ ಕೆಲಸ ಮಾಡುತ್ತಿರುವ 18ರಿಂದ 52ರ ವಯೋಮಾನದ ಎಲ್ಲ ಕಾಯಂ, ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಈ ಸೌಲಭ್ಯ ನೀಡಬೇಕು ಎಂದು ಎಲ್ಲ ಉದ್ಯೋಗದಾತರಿಗೂ ಸೂಚಿಸಿದೆ.

ಈ ಸಂಬಂಧ ಸರ್ಕಾರ 2024ರ ಜನವರಿ 12ರಂದು ಅಧಿಸೂಚನೆ ಹೊರಡಿಸಿತ್ತು. ಜತೆಗೆ ಕಾರ್ಮಿಕ ಇಲಾಖೆ ಆಯುಕ್ತರು 21/02/2025ರಂದು ಪತ್ರ ಬರೆದಿದ್ದರು.

ಬಳಿಕ 9/10/2025ರಂದು ನಡೆದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ಕೂಡ ನೀಡಲಾಗಿತ್ತು.

ಈ ಎಲ್ಲದರ ಹಿನ್ನೆಯಲ್ಲಿ ಇಂದು ಆದೇಶ ಹೊರಡಿಸಿರುವ ಕಾರ್ಮಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್‌.ಸುಮ ಅವರು, ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961ರಡಿ ನೋಂದಣಿಯಾಗಿರುವ ಎಲ್ಲ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲರಿಗೂ ಇದು ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಷರತ್ತುಗಳು:

1. ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ ಋತುಚಕ್ರ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು ಅವಕಾಶವಿರುವುದಿಲ್ಲ.

2. ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ ಎಂಬ ಷರತ್ತುಗಳನ್ನು ವಿವರಿಸಿ ಆದೇಶಿಸಿದ್ದಾರೆ.

3. 52 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಈ ರಜೆಯ ಸೌಲಭ್ಯ ಇಲ್ಲ

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

10 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

11 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

12 hours ago