Featured

ಉದ್ಯೋಗಿಗಳು ಸೆ.​ 30ರೊಳಗೆ ಆಸ್ತಿ ಘೋಷಿಸದಿದ್ದರೆ ಸಂಬಳವಿಲ್ಲ :  ಯುಪಿ ಸರ್ಕಾರ ಆದೇಶ – vishwanews24

ಉದ್ಯೋಗಿಗಳು ಸೆ.​ 30ರೊಳಗೆ ಆಸ್ತಿ ಘೋಷಿಸದಿದ್ದರೆ ಸಂಬಳವಿಲ್ಲ :  ಯುಪಿ ಸರ್ಕಾರ ಆದೇಶ

ಉತ್ತರ ಪ್ರದೇಶ :ಆಡಳಿತದಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಉತ್ತರ ಪ್ರದೇಶ ಸರ್ಕಾರವು ತನ್ನ ಉದ್ಯೋಗಿಗಳಿಗೆ ಸೆಪ್ಟೆಂಬರ್ 30ರೊಳಗೆ ತಮ್ಮ ಚರ ಹಾಗೂ ಸ್ಥಿರ ಆಸ್ತಿಗಳನ್ನು ಬಹಿರಂಗಪಡಿಸದಿದ್ದರೆ ಸಂಬಳ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಮನೋಜ್ ಕುಮಾರ್ ಸಿಂಗ್ ಹೊರಡಿಸಿದ ಆದೇಶದಲ್ಲಿ, ಎಲ್ಲಾ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಇಲಾಖೆಗಳ ಮುಖ್ಯಸ್ಥರು ತಮ್ಮ ಆಸ್ತಿ ವಿವರಗಳನ್ನು ಮಾನವ್ ಸಂಪದ ಪೋರ್ಟಲ್​ನಲ್ಲಿ ಸೆಪ್ಟೆಂಬರ್ 30 ರೊಳಗೆ ಘೋಷಿಸಬೇಕು.

ಆದೇಶವನ್ನು ಪಾಲಿಸುತ್ತಿರುವ ನೌಕರರನ್ನು ಸಕಾಲದಲ್ಲಿ ಪರಿಶೀಲಿಸುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರವು ಡ್ರಾಯಿಂಗ್ ಮತ್ತು ಡಿಸ್ಬರ್ಸಿಂಗ್ ಅಧಿಕಾರಿ (ಡಿಡಿಒ) ಅವರಿಗೆ ವಹಿಸಿದೆ.

ಪೋರ್ಟಲ್‌ನಲ್ಲಿ ತಮ್ಮ ಆಸ್ತಿ ವಿವರಗಳನ್ನು ಒದಗಿಸುವ ಉದ್ಯೋಗಿಗಳಿಗೆ ಮಾತ್ರ ಸೆಪ್ಟೆಂಬರ್ ಸಂಬಳವನ್ನು ನೀಡಲಾಗುತ್ತದೆ. ಕೆಲವು ನೌಕರರು ಹೆಚ್ಚಿನ ಸಮಯ ಕೋರಿದ ನಂತರ ರಾಜ್ಯ ಸರ್ಕಾರ ಸೆಪ್ಟೆಂಬರ್ 30 ರವರೆಗೆ ಗಡುವನ್ನು ವಿಸ್ತರಿಸಿತು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

9 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

9 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

10 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

10 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

11 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

11 hours ago