ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ಹಿರೇಕೋಟ್ನೆಕಲ್–ಬ್ಯಾಗವಾಟ್ ರಸ್ತೆಯ ಕೆನಾಲ್ ಸಮೀಪದ ಹೊಲ ಪ್ರದೇಶದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ, 11 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಜಾಲದ ಕಿಂಗ್ಪಿನ್ ಎಂದು ಗುರುತಿಸಲಾದ ಮಾನ್ವಿ ಇಂದಿರಾನಗರ ನಿವಾಸಿ ತಾಯಪ್ಪ ಸೇರಿದಂತೆ ಇತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:
ಆರೋಪಿಗಳು ಕೆಲಸದ ಹುಡುಕಾಟದಲ್ಲಿದ್ದ ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರನ್ನು ಸಂಪರ್ಕಿಸಿ, ಹೆಚ್ಚಿನ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಬಳಿಕ ವೇಶ್ಯಾವಾಟಿಕೆಗೆ ದೂಡುತ್ತಿದ್ದರು ಎನ್ನಲಾಗಿದೆ.
ಖಚಿತ ಮಾಹಿತಿ ಮೇರೆಗೆ ಶನಿವಾರ ರಾತ್ರಿ ದಾಳಿ ನಡೆಸಿದ ಪೊಲೀಸರು ಅಕ್ರಮ ಚಟುವಟಿಕೆಯನ್ನು ಭೇದಿಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿಂಧನೂರು ಡಿಎಸ್ಪಿ ಚಂದ್ರಶೇಖರ್ ನಾಯಕ್ ನೇತೃತ್ವ ವಹಿಸಿದ್ದರು. ಮಾನ್ವಿ ಪೊಲೀಸ್ ಠಾಣೆಯ ಪಿಐ ಸೋಮಶೇಖರ ಎಸ್. ಕೆಂಚರೆಡ್ಡಿ, ಪಿಎಸ್ಐ ಅಜ್ಮೀರ್, ಎಎಸ್ಐ ಹನುಮೇಶ್ ಹಾಗೂ ಸಿಬ್ಬಂದಿ ಹುಸೇನ್ ಸಾಬ್, ಬಸನಗೌಡ, ಸೂಗಪ್ಪ, ಚರಣ, ಪ್ರಕಾಶ್ ಸೇರಿದಂತೆ ಕ್ರೈಂ ಬ್ರಾಂಚ್ ತಂಡ ಪಾಲ್ಗೊಂಡಿತ್ತು.
ಇದನ್ನೂ ಓದಿ:
ದಾಳಿ ವೇಳೆ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…