ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ಹಿರೇಕೋಟ್ನೆಕಲ್–ಬ್ಯಾಗವಾಟ್ ರಸ್ತೆಯ ಕೆನಾಲ್ ಸಮೀಪದ ಹೊಲ ಪ್ರದೇಶದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ, 11 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಜಾಲದ ಕಿಂಗ್ಪಿನ್ ಎಂದು ಗುರುತಿಸಲಾದ ಮಾನ್ವಿ ಇಂದಿರಾನಗರ ನಿವಾಸಿ ತಾಯಪ್ಪ ಸೇರಿದಂತೆ ಇತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:
ಆರೋಪಿಗಳು ಕೆಲಸದ ಹುಡುಕಾಟದಲ್ಲಿದ್ದ ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರನ್ನು ಸಂಪರ್ಕಿಸಿ, ಹೆಚ್ಚಿನ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಬಳಿಕ ವೇಶ್ಯಾವಾಟಿಕೆಗೆ ದೂಡುತ್ತಿದ್ದರು ಎನ್ನಲಾಗಿದೆ.
ಖಚಿತ ಮಾಹಿತಿ ಮೇರೆಗೆ ಶನಿವಾರ ರಾತ್ರಿ ದಾಳಿ ನಡೆಸಿದ ಪೊಲೀಸರು ಅಕ್ರಮ ಚಟುವಟಿಕೆಯನ್ನು ಭೇದಿಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿಂಧನೂರು ಡಿಎಸ್ಪಿ ಚಂದ್ರಶೇಖರ್ ನಾಯಕ್ ನೇತೃತ್ವ ವಹಿಸಿದ್ದರು. ಮಾನ್ವಿ ಪೊಲೀಸ್ ಠಾಣೆಯ ಪಿಐ ಸೋಮಶೇಖರ ಎಸ್. ಕೆಂಚರೆಡ್ಡಿ, ಪಿಎಸ್ಐ ಅಜ್ಮೀರ್, ಎಎಸ್ಐ ಹನುಮೇಶ್ ಹಾಗೂ ಸಿಬ್ಬಂದಿ ಹುಸೇನ್ ಸಾಬ್, ಬಸನಗೌಡ, ಸೂಗಪ್ಪ, ಚರಣ, ಪ್ರಕಾಶ್ ಸೇರಿದಂತೆ ಕ್ರೈಂ ಬ್ರಾಂಚ್ ತಂಡ ಪಾಲ್ಗೊಂಡಿತ್ತು.
ಇದನ್ನೂ ಓದಿ:
ದಾಳಿ ವೇಳೆ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…