Featured

ಉನ್ನತಮಟ್ಟದ ತನಿಖೆಗೆ ಮೋದಿ ಅವರನ್ನು ಭೇಟಿ ಮಾಡಿಸುವುದಾಗಿ ಹೇಳಿ ಮರೆತೇಬಿಟ್ಟ ನಳಿನ್‌ ಕುಮಾರ್ ಮತ್ತು ಹರೀಶ್ ಪೂಂಜಾ  : ಸೌಜನ್ಯ ತಾಯಿ ಆಕ್ರೋಶ – Vishwanews24

ಉನ್ನತಮಟ್ಟದ ತನಿಖೆಗೆ ಮೋದಿ ಅವರನ್ನು ಭೇಟಿ ಮಾಡಿಸುವುದಾಗಿ ಹೇಳಿ ಮರೆತೇಬಿಟ್ಟ ನಳಿನ್‌ ಕುಮಾರ್ ಮತ್ತು ಹರೀಶ್ ಪೂಂಜಾ  : ಸೌಜನ್ಯ ತಾಯಿ ಆಕ್ರೋಶ

ನವದೆಹಲಿ : ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಉನ್ನತಮಟ್ಟದ ತನಿಖೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿಸುವುದಾಗಿ ಹೇಳಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಹರೀಶ್ ಪೂಂಜಾ ಮಾತುಕೊಟ್ಟು ಮರೆತು ಬಿಟ್ಟಿದ್ದಾರೆ ಎಂದು ಸೌಜನ್ಯ ತಾಯಿ ಕುಸುಮಾವತಿ ಆಕ್ರೋಶ ವ್ಯಕ್ತಪಡಿಸಿದರು.

ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಕರ್ನಾಟಕ ಭವನದ ಸಮೀಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ದೆಹಲಿ ಚಲೋ’ ಪ್ರತಿಭಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಗಳ ಕೊಲೆಯಾಗಿ 12 ವರ್ಷಗಳು ಕಳೆದಿವೆ. ನಾವು 12 ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಿದ್ದೇವೆ. ಆದರೆ, ಅತ್ಯಾಚಾರಿಗಳು ನಿರಾಂತಕವಾಗಿ ಓಡಾಡುತ್ತಿದ್ದಾರೆ. ಅವರಿಗೆ ಕಠಿಣ ಶಿಕ್ಷೆ ಆಗಬೇಕು. ಜನಪ್ರತಿನಿಧಿಗಳು ಜನಾಂದೋಲನದಲ್ಲಿ ಭಾಷಣ ಮಾಡಿ ಹೋಗಿದ್ದಾರೆ. ಆ ಬಳಿಕ ನಮ್ಮ ನೆರವಿಗೆ ಬಂದಿಲ್ಲ. ಪ್ರಧಾನಿ ಅವರನ್ನು ಭೇಟಿ ಮಾಡಬೇಕು ಎಂಬ ಉದ್ದೇಶದಿಂದ ದೆಹಲಿಗೆ ಬಂದಿದ್ದೇವೆ’ ಎಂದರು. ಸಂಸದ ನಳಿನ್‌ ಕುಮಾರ್ ಕಟೀಲು ಹಾಗೂ ಸ್ಥಳೀಯ ಶಾಸಕ ಹರೀಶ್‌ ಪೂಂಜಾ ಪ್ರಧಾನಿಯವರನ್ನು ಭೇಟಿ ಮಾಡಿಸುತ್ತೇವೆ ಎಂದು ವಾಗ್ದಾನ ಮಾಡಿದ್ದರು. ಬಳಿಕ ಅದನ್ನು ಮರೆತೇಬಿಟ್ಟರು. ಅವರು ನಮ್ಮ ಪರವಾಗಿ ನಿಲ್ಲಲಿಲ್ಲ’ ಎಂದು ಸೌಜನ್ಯ ತಾಯಿ ಕುಸುಮಾವತಿ ಆಕ್ರೋಶ ವ್ಯಕ್ತಪಡಿಸಿದರು.

ರೈತರ ಹೋರಾಟದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಿಷೇಧಾಜ್ಞೆ ಹೇರಲಾಗಿದ್ದು, ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿದರು. ಬಳಿಕ ಪ್ರತಿಭಟನಾಕಾರರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

9 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

9 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

9 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

10 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

10 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

12 hours ago