Featured

ಉನ್ನತಮಟ್ಟದ ತನಿಖೆಗೆ ಮೋದಿ ಅವರನ್ನು ಭೇಟಿ ಮಾಡಿಸುವುದಾಗಿ ಹೇಳಿ ಮರೆತೇಬಿಟ್ಟ ನಳಿನ್‌ ಕುಮಾರ್ ಮತ್ತು ಹರೀಶ್ ಪೂಂಜಾ  : ಸೌಜನ್ಯ ತಾಯಿ ಆಕ್ರೋಶ – Vishwanews24

ಉನ್ನತಮಟ್ಟದ ತನಿಖೆಗೆ ಮೋದಿ ಅವರನ್ನು ಭೇಟಿ ಮಾಡಿಸುವುದಾಗಿ ಹೇಳಿ ಮರೆತೇಬಿಟ್ಟ ನಳಿನ್‌ ಕುಮಾರ್ ಮತ್ತು ಹರೀಶ್ ಪೂಂಜಾ  : ಸೌಜನ್ಯ ತಾಯಿ ಆಕ್ರೋಶ

ನವದೆಹಲಿ : ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಉನ್ನತಮಟ್ಟದ ತನಿಖೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿಸುವುದಾಗಿ ಹೇಳಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಹರೀಶ್ ಪೂಂಜಾ ಮಾತುಕೊಟ್ಟು ಮರೆತು ಬಿಟ್ಟಿದ್ದಾರೆ ಎಂದು ಸೌಜನ್ಯ ತಾಯಿ ಕುಸುಮಾವತಿ ಆಕ್ರೋಶ ವ್ಯಕ್ತಪಡಿಸಿದರು.

ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಕರ್ನಾಟಕ ಭವನದ ಸಮೀಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ದೆಹಲಿ ಚಲೋ’ ಪ್ರತಿಭಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಗಳ ಕೊಲೆಯಾಗಿ 12 ವರ್ಷಗಳು ಕಳೆದಿವೆ. ನಾವು 12 ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಿದ್ದೇವೆ. ಆದರೆ, ಅತ್ಯಾಚಾರಿಗಳು ನಿರಾಂತಕವಾಗಿ ಓಡಾಡುತ್ತಿದ್ದಾರೆ. ಅವರಿಗೆ ಕಠಿಣ ಶಿಕ್ಷೆ ಆಗಬೇಕು. ಜನಪ್ರತಿನಿಧಿಗಳು ಜನಾಂದೋಲನದಲ್ಲಿ ಭಾಷಣ ಮಾಡಿ ಹೋಗಿದ್ದಾರೆ. ಆ ಬಳಿಕ ನಮ್ಮ ನೆರವಿಗೆ ಬಂದಿಲ್ಲ. ಪ್ರಧಾನಿ ಅವರನ್ನು ಭೇಟಿ ಮಾಡಬೇಕು ಎಂಬ ಉದ್ದೇಶದಿಂದ ದೆಹಲಿಗೆ ಬಂದಿದ್ದೇವೆ’ ಎಂದರು. ಸಂಸದ ನಳಿನ್‌ ಕುಮಾರ್ ಕಟೀಲು ಹಾಗೂ ಸ್ಥಳೀಯ ಶಾಸಕ ಹರೀಶ್‌ ಪೂಂಜಾ ಪ್ರಧಾನಿಯವರನ್ನು ಭೇಟಿ ಮಾಡಿಸುತ್ತೇವೆ ಎಂದು ವಾಗ್ದಾನ ಮಾಡಿದ್ದರು. ಬಳಿಕ ಅದನ್ನು ಮರೆತೇಬಿಟ್ಟರು. ಅವರು ನಮ್ಮ ಪರವಾಗಿ ನಿಲ್ಲಲಿಲ್ಲ’ ಎಂದು ಸೌಜನ್ಯ ತಾಯಿ ಕುಸುಮಾವತಿ ಆಕ್ರೋಶ ವ್ಯಕ್ತಪಡಿಸಿದರು.

ರೈತರ ಹೋರಾಟದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಿಷೇಧಾಜ್ಞೆ ಹೇರಲಾಗಿದ್ದು, ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿದರು. ಬಳಿಕ ಪ್ರತಿಭಟನಾಕಾರರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

36 minutes ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 hour ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

3 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

3 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

4 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

4 hours ago