ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದ ಆರೋಪಿ ಹಾಗೂ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರನ್ನು ಪಕ್ಷದಿಂದ ಗುರುವಾರ ಉಚ್ಚಾಟಿಸಲಾಗಿದೆ.
“ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಹೊತ್ತಿರುವ ಪಕ್ಷದ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ಆಡಳಿತಾರೂಢ ಬಿಜೆಪಿ ಬೆಂಬಲವಿದೆ” ಎಂದು ಪ್ರತಿಪಕ್ಷ ಕಾಂಗ್ರೆಸ್, ಬಿಎಸ್ಪಿ ಮತ್ತು ಎಸ್ಪಿ ಸೇರಿ ಅನೇಕ ಪಕ್ಷದ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ, ಆರೋಪ ಎದುರಿಸುತ್ತಿರುವ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ನನ್ನು ‘ಭಾರತೀಯ ಜನತಾ ಪಕ್ಷ’ ಗುರುವಾರ ಪಕ್ಷದಿಂದ ಉಚ್ಛಾಟಿಸಿದೆ ಎಂದು ಯುಪಿ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಹೇಳಿದ್ದಾರೆ.
ಉನ್ನಾವ್ ಅತ್ಯಾಚಾರ ಪ್ರಕರಣ ಈಗಾಗಲೇ ಸಿಬಿಐಗೆ ಹಸ್ತಾಂತರವಾಗಿದ್ದು, ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಮತ್ತು ಇತರ ಒಂಬತ್ತು ಮಂದಿ ವಿರುದ್ಧ ಸೋಮವಾರ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ ಸಿಬಿಐ ತನಿಖೆಯನ್ನು ಅತ್ಯಂತ ತ್ವರಿತಗತಿಯಲ್ಲಿ ಅಂದರೆ 7 ದಿನಗಳೊಳಗೆ ಮುಗಿಸುವಂತೆ ಸುಪ್ರೀಂ ಕೋರ್ಟ್ ಸಿಬಿಐಗೆ ಆದೇಶ ನೀಡಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…