ನವದೆಹಲಿ: ಮೂರು ವರ್ಷಗಳ (2017ರ ಜೂನ್ 4) ಹಿಂದೆ ಉತ್ತರಪ್ರದೇಶದ ಉನ್ನಾವೋದಲ್ಲಿ ಅಪ್ರಾಪ್ತೆ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಉಚ್ಚಾಟಿತ ಶಾಸಕ ಕುಲದೀಪ್ ಸೇಂಗಾರ್ ದೋಷಿ ಎಂದು ದೆಹಲಿ ತೀಸ್ ಹಜಾರಿ ಕೋರ್ಟ್ ಇಂದು ತೀರ್ಪು ನೀಡಿದೆ.
ಇಂದು ತೀರ್ಪು ನೀಡಿರುವ ನ್ಯಾಯಾಲಯ ಶಿಕ್ಷೆ ಪ್ರಮಾಣವನ್ನು ಡಿ.19ರಂದು ಪ್ರಕಟಿಸಲಿದೆ. ಕುಲದೀಪ್ ಸೇಂಗಾರ್ ಸಹಚರ ಶಶಿ ಸಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕೋರ್ಟ್, ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಆತನನ್ನು ಖುಲಾಸೆಗೊಳಿಸಿದೆ.
2017ರಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರವಾಗಿತ್ತು. ಈ ಪ್ರಕರಣದಲ್ಲಿ ಅಂದಿನ ಬಿಜೆಪಿ ಎಂಎಲ್ಎ ಕುಲದೀಪ್ ಸೇಂಗಾರ್ ಹೆಸರು ಕೇಳಿಬಂದಿತ್ತು.
ಸಂತ್ರಸ್ತೆ ಪ್ರಯಾಣ ಮಾಡುತ್ತಿದ್ದ ಕಾರಿಗೆ ಅಪಘಾತ ಮಾಡಿಸಿ ಆಕೆಯನ್ನು ಹತ್ಯೆ ಮಾಡುವ ಯತ್ನ ಕೂಡ ನಡೆದಿತ್ತು. ಗಾಯಗೊಂಡಿದ್ದ ಯುವತಿಯನ್ನು ದೆಹಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಪ್ರಕರಣದ ತನಿಖೆಯನ್ನು ಯೋಗಿ ಆದಿತ್ಯನಾಥ್ ಸಿಬಿಐಗೆ ವಹಿಸಿದ್ದರು. 2019ರ ಏಪ್ರಿಲ್ನಲ್ಲಿ ಕುಲದೀಪ್ ಸೇಂಗಾರ್ ಬಂಧನವಾಗಿತ್ತು.
2017ರಲ್ಲಿ ನಡೆದಿದ್ದ ಉನ್ನಾವ್ ಅತ್ಯಾಚಾರ ಪ್ರಕರಣ, ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಉತ್ತರ ಪ್ರದೇಶದ ಉನ್ನಾವ್ನಲ್ಲಿ ನಡೆದಿದ್ದ ಈ ಪ್ರಕರಣದ ಸಂತ್ರಸ್ಥೆ ಅಪ್ತಾಪ್ತೆ ಅನ್ನೋದು ಗಮನಾರ್ಹ ವಿಚಾರ. 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಈ ಪ್ರಕರಣದಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕ ಕುಲದೀಪ್ ಸೆಂಗರ್ ಪ್ರಮುಖ ಆರೋಪಿಯಾಗಿದ್ದರು. ಇದೀಗ ಪ್ರಕರಣದ ತೀರ್ಪು ಹೊರಬಿದ್ದಿದ್ದು, ಕುಲದೀಪ್ ಮೇಲಿದ್ದ ಆರೋಪ ಸಾಬೀತಾಗಿದೆ
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…