ನವದೆಹಲಿ: ಮೂರು ವರ್ಷಗಳ (2017ರ ಜೂನ್ 4) ಹಿಂದೆ ಉತ್ತರಪ್ರದೇಶದ ಉನ್ನಾವೋದಲ್ಲಿ ಅಪ್ರಾಪ್ತೆ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಉಚ್ಚಾಟಿತ ಶಾಸಕ ಕುಲದೀಪ್ ಸೇಂಗಾರ್ ದೋಷಿ ಎಂದು ದೆಹಲಿ ತೀಸ್ ಹಜಾರಿ ಕೋರ್ಟ್ ಇಂದು ತೀರ್ಪು ನೀಡಿದೆ.
ಇಂದು ತೀರ್ಪು ನೀಡಿರುವ ನ್ಯಾಯಾಲಯ ಶಿಕ್ಷೆ ಪ್ರಮಾಣವನ್ನು ಡಿ.19ರಂದು ಪ್ರಕಟಿಸಲಿದೆ. ಕುಲದೀಪ್ ಸೇಂಗಾರ್ ಸಹಚರ ಶಶಿ ಸಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕೋರ್ಟ್, ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಆತನನ್ನು ಖುಲಾಸೆಗೊಳಿಸಿದೆ.
2017ರಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರವಾಗಿತ್ತು. ಈ ಪ್ರಕರಣದಲ್ಲಿ ಅಂದಿನ ಬಿಜೆಪಿ ಎಂಎಲ್ಎ ಕುಲದೀಪ್ ಸೇಂಗಾರ್ ಹೆಸರು ಕೇಳಿಬಂದಿತ್ತು.
ಸಂತ್ರಸ್ತೆ ಪ್ರಯಾಣ ಮಾಡುತ್ತಿದ್ದ ಕಾರಿಗೆ ಅಪಘಾತ ಮಾಡಿಸಿ ಆಕೆಯನ್ನು ಹತ್ಯೆ ಮಾಡುವ ಯತ್ನ ಕೂಡ ನಡೆದಿತ್ತು. ಗಾಯಗೊಂಡಿದ್ದ ಯುವತಿಯನ್ನು ದೆಹಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಪ್ರಕರಣದ ತನಿಖೆಯನ್ನು ಯೋಗಿ ಆದಿತ್ಯನಾಥ್ ಸಿಬಿಐಗೆ ವಹಿಸಿದ್ದರು. 2019ರ ಏಪ್ರಿಲ್ನಲ್ಲಿ ಕುಲದೀಪ್ ಸೇಂಗಾರ್ ಬಂಧನವಾಗಿತ್ತು.
2017ರಲ್ಲಿ ನಡೆದಿದ್ದ ಉನ್ನಾವ್ ಅತ್ಯಾಚಾರ ಪ್ರಕರಣ, ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಉತ್ತರ ಪ್ರದೇಶದ ಉನ್ನಾವ್ನಲ್ಲಿ ನಡೆದಿದ್ದ ಈ ಪ್ರಕರಣದ ಸಂತ್ರಸ್ಥೆ ಅಪ್ತಾಪ್ತೆ ಅನ್ನೋದು ಗಮನಾರ್ಹ ವಿಚಾರ. 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಈ ಪ್ರಕರಣದಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕ ಕುಲದೀಪ್ ಸೆಂಗರ್ ಪ್ರಮುಖ ಆರೋಪಿಯಾಗಿದ್ದರು. ಇದೀಗ ಪ್ರಕರಣದ ತೀರ್ಪು ಹೊರಬಿದ್ದಿದ್ದು, ಕುಲದೀಪ್ ಮೇಲಿದ್ದ ಆರೋಪ ಸಾಬೀತಾಗಿದೆ
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…
ಪಾಸ್ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…
ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…