ನವದೆಹಲಿ: ಮೂರು ವರ್ಷಗಳ (2017ರ ಜೂನ್ 4) ಹಿಂದೆ ಉತ್ತರಪ್ರದೇಶದ ಉನ್ನಾವೋದಲ್ಲಿ ಅಪ್ರಾಪ್ತೆ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಉಚ್ಚಾಟಿತ ಶಾಸಕ ಕುಲದೀಪ್ ಸೇಂಗಾರ್ ದೋಷಿ ಎಂದು ದೆಹಲಿ ತೀಸ್ ಹಜಾರಿ ಕೋರ್ಟ್ ಇಂದು ತೀರ್ಪು ನೀಡಿದೆ.
ಇಂದು ತೀರ್ಪು ನೀಡಿರುವ ನ್ಯಾಯಾಲಯ ಶಿಕ್ಷೆ ಪ್ರಮಾಣವನ್ನು ಡಿ.19ರಂದು ಪ್ರಕಟಿಸಲಿದೆ. ಕುಲದೀಪ್ ಸೇಂಗಾರ್ ಸಹಚರ ಶಶಿ ಸಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕೋರ್ಟ್, ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಆತನನ್ನು ಖುಲಾಸೆಗೊಳಿಸಿದೆ.
2017ರಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರವಾಗಿತ್ತು. ಈ ಪ್ರಕರಣದಲ್ಲಿ ಅಂದಿನ ಬಿಜೆಪಿ ಎಂಎಲ್ಎ ಕುಲದೀಪ್ ಸೇಂಗಾರ್ ಹೆಸರು ಕೇಳಿಬಂದಿತ್ತು.
ಸಂತ್ರಸ್ತೆ ಪ್ರಯಾಣ ಮಾಡುತ್ತಿದ್ದ ಕಾರಿಗೆ ಅಪಘಾತ ಮಾಡಿಸಿ ಆಕೆಯನ್ನು ಹತ್ಯೆ ಮಾಡುವ ಯತ್ನ ಕೂಡ ನಡೆದಿತ್ತು. ಗಾಯಗೊಂಡಿದ್ದ ಯುವತಿಯನ್ನು ದೆಹಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಪ್ರಕರಣದ ತನಿಖೆಯನ್ನು ಯೋಗಿ ಆದಿತ್ಯನಾಥ್ ಸಿಬಿಐಗೆ ವಹಿಸಿದ್ದರು. 2019ರ ಏಪ್ರಿಲ್ನಲ್ಲಿ ಕುಲದೀಪ್ ಸೇಂಗಾರ್ ಬಂಧನವಾಗಿತ್ತು.
2017ರಲ್ಲಿ ನಡೆದಿದ್ದ ಉನ್ನಾವ್ ಅತ್ಯಾಚಾರ ಪ್ರಕರಣ, ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಉತ್ತರ ಪ್ರದೇಶದ ಉನ್ನಾವ್ನಲ್ಲಿ ನಡೆದಿದ್ದ ಈ ಪ್ರಕರಣದ ಸಂತ್ರಸ್ಥೆ ಅಪ್ತಾಪ್ತೆ ಅನ್ನೋದು ಗಮನಾರ್ಹ ವಿಚಾರ. 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಈ ಪ್ರಕರಣದಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕ ಕುಲದೀಪ್ ಸೆಂಗರ್ ಪ್ರಮುಖ ಆರೋಪಿಯಾಗಿದ್ದರು. ಇದೀಗ ಪ್ರಕರಣದ ತೀರ್ಪು ಹೊರಬಿದ್ದಿದ್ದು, ಕುಲದೀಪ್ ಮೇಲಿದ್ದ ಆರೋಪ ಸಾಬೀತಾಗಿದೆ
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…