ಬೆಂಗಳೂರು: ಅನರ್ಹಗೊಂಡ ಶಾಸಕರಿಂದ ತೆರವಾಗಿರುವ ಕ್ಷೇತ್ರಗಳಿಗೆ ಎದುರಾಗಲಿರುವ ಉಪಚುನಾವಣೆಗೆ ಮೈತ್ರಿ ಬೇಡ, ಪ್ರತ್ಯೇಕವಾಗಿ ಚುನಾವಣೆ ಎದುರಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ನಿರ್ಧಾರ ಕೈಗೊಂಡಿದೆ.
ಉಪ ಚುನಾವಣೆಯನ್ನು ಸ್ವತಂತ್ರವಾಗಿ ಎದುರಿಸುವ ಕುರಿತು ಹೈಕಮಾಂಡ್’ಗೆ ಶಿಫಾರಸು ಮಾಡಲು ಕೆಪಿಸಿಸಿ ಹಿರಿಯ ನಾಯಕರು ನಿರ್ಧಾರ ಕೈಗೊಂಡಿದ್ದಾರೆ. ಜೊತೆಗೆ, ಈ ಎಲ್ಲಾ 17 ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಿಂದ ಕಣಕ್ಕಳಿಸಲು ಪ್ರಬಲ ಅಭ್ಯರ್ಥಿಗಳ ಹುಡುಕಾಟ ಆರಂಭಿಸಲು ತೀರ್ಮಾನಿಸಿದ್ದಾರೆಂದು ತಿಳಿದುಬಂದಿದೆ.
ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ದಿನೇಶ್ ಗುಂಡುರಾವ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಮಾಡಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್, ಹಿರಿಯ ನಾಯಕ ಎಂ.ವೀರಪ್ಪ ಮೊಯ್ಲಿ ಸೇರಿದಂತೆ ಹಿರಿಯ ನಾಯಕರು ಭಾಗಿಯಾಗಿದ್ದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ತೆರವುಗೊಂಡಿರುವ ಕ್ಷೇತ್ರಗಳಲ್ಲಿ ಹಿರಿಯ ನಾಯಕರ ನೇತೃತ್ವದಲ್ಲಿ ಒಂದೊಂದು ತಂಡವನ್ನು ಈಗಾಗಲೇ ರಚನೆ ಮಾಡಲಾಗಿದ್ದು, ಈ ತಂಡದ ಮುಖಾಂತರ ನಾಯಕರು ಕಾರ್ಯಗಳನ್ನು ನಿರ್ವಹಿಸಲಿದ್ದಾರೆಂದು ತಿಳಿಸಿದ್ದಾರೆ.
ಉಪಚುನಾವಣೆ ಸಮರಕ್ಕೆ ಮೈತ್ರಿ ಅಭ್ಯರ್ಥಿಗಳ ಆಯ್ಕೆ ಉತ್ತಮವಾದುದಲ್ಲ. ಮೈತ್ರಿ ಅಭ್ಯರ್ಥಿಗಳ ಆಯ್ಕೆಗೆ ಪಕ್ಷದ ಕಾರ್ಯಕರ್ತರು ಒಪ್ಪುವುದೂ ಇಲ್ಲ. ಜೆಡಿಎಸ್ ಅಭ್ಯರ್ಥಿಗೆ ಕಾಂಗ್ರೆಸ್ ಕಾರ್ಯಕರ್ತು ಬೆಂಬಲ ನೀಡಲು ಆಸಕ್ತಿ ತೋರುವುದಿಲ್ಲ. ಇದೇ ಕಾರಣಕ್ಕೆ ತುಮಕೂರಿನಲ್ಲಿ ಜೆಡಿಎಸ್ ಸೋಲು ಕಂಡಿತ್ತು ಎಂದು ಹೇಳಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…