Featured

ಉಪಚುನಾವಣೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಪ್ರತ್ಯೇಕವಾಗಿ ಚುನಾವಣೆ ನಿರ್ಧಾರ -Vishwanews24

ಬೆಂಗಳೂರು: ಅನರ್ಹಗೊಂಡ ಶಾಸಕರಿಂದ ತೆರವಾಗಿರುವ ಕ್ಷೇತ್ರಗಳಿಗೆ ಎದುರಾಗಲಿರುವ ಉಪಚುನಾವಣೆಗೆ ಮೈತ್ರಿ ಬೇಡ, ಪ್ರತ್ಯೇಕವಾಗಿ ಚುನಾವಣೆ ಎದುರಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ನಿರ್ಧಾರ ಕೈಗೊಂಡಿದೆ.

ಉಪ ಚುನಾವಣೆಯನ್ನು ಸ್ವತಂತ್ರವಾಗಿ ಎದುರಿಸುವ ಕುರಿತು ಹೈಕಮಾಂಡ್’ಗೆ ಶಿಫಾರಸು ಮಾಡಲು ಕೆಪಿಸಿಸಿ ಹಿರಿಯ ನಾಯಕರು ನಿರ್ಧಾರ ಕೈಗೊಂಡಿದ್ದಾರೆ. ಜೊತೆಗೆ, ಈ ಎಲ್ಲಾ 17 ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಿಂದ ಕಣಕ್ಕಳಿಸಲು ಪ್ರಬಲ ಅಭ್ಯರ್ಥಿಗಳ ಹುಡುಕಾಟ ಆರಂಭಿಸಲು ತೀರ್ಮಾನಿಸಿದ್ದಾರೆಂದು ತಿಳಿದುಬಂದಿದೆ.

ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ದಿನೇಶ್ ಗುಂಡುರಾವ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಮಾಡಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್, ಹಿರಿಯ ನಾಯಕ ಎಂ.ವೀರಪ್ಪ ಮೊಯ್ಲಿ ಸೇರಿದಂತೆ ಹಿರಿಯ ನಾಯಕರು ಭಾಗಿಯಾಗಿದ್ದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ತೆರವುಗೊಂಡಿರುವ ಕ್ಷೇತ್ರಗಳಲ್ಲಿ ಹಿರಿಯ ನಾಯಕರ ನೇತೃತ್ವದಲ್ಲಿ ಒಂದೊಂದು ತಂಡವನ್ನು ಈಗಾಗಲೇ ರಚನೆ ಮಾಡಲಾಗಿದ್ದು, ಈ ತಂಡದ ಮುಖಾಂತರ ನಾಯಕರು ಕಾರ್ಯಗಳನ್ನು ನಿರ್ವಹಿಸಲಿದ್ದಾರೆಂದು ತಿಳಿಸಿದ್ದಾರೆ.

ಉಪಚುನಾವಣೆ ಸಮರಕ್ಕೆ ಮೈತ್ರಿ ಅಭ್ಯರ್ಥಿಗಳ ಆಯ್ಕೆ ಉತ್ತಮವಾದುದಲ್ಲ. ಮೈತ್ರಿ ಅಭ್ಯರ್ಥಿಗಳ ಆಯ್ಕೆಗೆ ಪಕ್ಷದ ಕಾರ್ಯಕರ್ತರು ಒಪ್ಪುವುದೂ ಇಲ್ಲ. ಜೆಡಿಎಸ್ ಅಭ್ಯರ್ಥಿಗೆ ಕಾಂಗ್ರೆಸ್ ಕಾರ್ಯಕರ್ತು ಬೆಂಬಲ ನೀಡಲು ಆಸಕ್ತಿ ತೋರುವುದಿಲ್ಲ. ಇದೇ ಕಾರಣಕ್ಕೆ ತುಮಕೂರಿನಲ್ಲಿ ಜೆಡಿಎಸ್ ಸೋಲು ಕಂಡಿತ್ತು ಎಂದು ಹೇಳಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago