ತುಮಕೂರು,: “ಉಪಚುನಾವಣೆಗೆ ಕೊರೊನಾ ನಿಯಮ ಹಾಗೂ ಜನಸಂಖ್ಯೆ ಮಿತಿ ಅನ್ವಯಿಸುವುದಿಲ್ಲ” ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ತಿಪಟೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾಲ್ಕು ಗೋಡೆಗಳ ನಡುವೆ ನಡೆಯುವ ಕಾರ್ಯಕ್ರಮಗಳಿಗೆ ಮಿತಿ ಷರತ್ತು ಹಾಕಿದ್ದು, ಸಾರ್ವಜನಿಕ ಸಭೆಯಗಳಿಗೆ ಯಾವುದೇ ನಿರ್ಬಂಧ ಹೇರಿಲ್ಲ. ಮುಂಜಾಗ್ರತಾ ಕ್ರಮಕೈಗೊಂಡು ಕಾರ್ಯಕ್ರಮ ಮಾಡಬಹುದು” ಎಂದಿದ್ದಾರೆ.
ಇದನ್ನೂ ಓದಿ : ಮಂಗಳೂರು ಕಪಿಲ ಗೋಶಾಲೆ :ತಾತ್ಕಾಲಿಕ ನಿರ್ಮಾಣಕ್ಕಾಗಿ 1 ಲಕ್ಷ ರೂ. ಚೆಕ್ ನೀಡಿದ ಮೋಯ್ದಿನ್ ಬಾವಾ -Vishwanews24
ಶಾಲಾ-ಕಾಲೇಜು ಬಂದ್ ಮಾಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಶಾಲಾ-ಕಾಲೇಜು ಬಂದ್ ಮಾಡುವ ವಿಚಾರದ ಬಗ್ಗೆ ಯೋಚನೆ ಇಲ್ಲ. ಒಂದು ವಾರದ ಬಳಿಕ ಜನರಲ್ಲಿ ಸುಧಾರಣೆ ಕಂಡುಬಾರದೇ ಇದ್ದರೆ ಹಾಗೂ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾದಲ್ಲಿ ಪರಿಸ್ಥಿತಿ ನೋಡಿ ನಿರ್ಧಾರ ಕೈಗೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.
ಕೊರೊನಾ ಹಣ ದುರುಪಯೋಗವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿದೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, “ವಿಧಾನಮಂಡಲದಲ್ಲಿ ಖರ್ಚು-ವೆಚ್ಚದ ವಿವರಣೆ ನೀಡಿದ್ದೇವೆ. ಹಣ ದುರುಪಯೋಗ ಆಗಿದೆ ಎಂದು ಹೇಳುವುದು ಸುಲಭ. ಸಾಕ್ಷ್ಯಾಧಾರಗಳಿಲ್ಲದೇ ಸುಖಾಸುಮ್ಮನೆ ಆರೋಪ ಮಾಡುವುದು ವಿಪಕ್ಷ ನಾಯಕರಿಗೆ ಉತ್ತಮವಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…