ತುಮಕೂರು,: “ಉಪಚುನಾವಣೆಗೆ ಕೊರೊನಾ ನಿಯಮ ಹಾಗೂ ಜನಸಂಖ್ಯೆ ಮಿತಿ ಅನ್ವಯಿಸುವುದಿಲ್ಲ” ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ತಿಪಟೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾಲ್ಕು ಗೋಡೆಗಳ ನಡುವೆ ನಡೆಯುವ ಕಾರ್ಯಕ್ರಮಗಳಿಗೆ ಮಿತಿ ಷರತ್ತು ಹಾಕಿದ್ದು, ಸಾರ್ವಜನಿಕ ಸಭೆಯಗಳಿಗೆ ಯಾವುದೇ ನಿರ್ಬಂಧ ಹೇರಿಲ್ಲ. ಮುಂಜಾಗ್ರತಾ ಕ್ರಮಕೈಗೊಂಡು ಕಾರ್ಯಕ್ರಮ ಮಾಡಬಹುದು” ಎಂದಿದ್ದಾರೆ.
ಇದನ್ನೂ ಓದಿ : ಮಂಗಳೂರು ಕಪಿಲ ಗೋಶಾಲೆ :ತಾತ್ಕಾಲಿಕ ನಿರ್ಮಾಣಕ್ಕಾಗಿ 1 ಲಕ್ಷ ರೂ. ಚೆಕ್ ನೀಡಿದ ಮೋಯ್ದಿನ್ ಬಾವಾ -Vishwanews24
ಶಾಲಾ-ಕಾಲೇಜು ಬಂದ್ ಮಾಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಶಾಲಾ-ಕಾಲೇಜು ಬಂದ್ ಮಾಡುವ ವಿಚಾರದ ಬಗ್ಗೆ ಯೋಚನೆ ಇಲ್ಲ. ಒಂದು ವಾರದ ಬಳಿಕ ಜನರಲ್ಲಿ ಸುಧಾರಣೆ ಕಂಡುಬಾರದೇ ಇದ್ದರೆ ಹಾಗೂ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾದಲ್ಲಿ ಪರಿಸ್ಥಿತಿ ನೋಡಿ ನಿರ್ಧಾರ ಕೈಗೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.
ಕೊರೊನಾ ಹಣ ದುರುಪಯೋಗವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿದೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, “ವಿಧಾನಮಂಡಲದಲ್ಲಿ ಖರ್ಚು-ವೆಚ್ಚದ ವಿವರಣೆ ನೀಡಿದ್ದೇವೆ. ಹಣ ದುರುಪಯೋಗ ಆಗಿದೆ ಎಂದು ಹೇಳುವುದು ಸುಲಭ. ಸಾಕ್ಷ್ಯಾಧಾರಗಳಿಲ್ಲದೇ ಸುಖಾಸುಮ್ಮನೆ ಆರೋಪ ಮಾಡುವುದು ವಿಪಕ್ಷ ನಾಯಕರಿಗೆ ಉತ್ತಮವಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ : ಸುನಿಲ್ ಕುಮಾರ್ ಕಾರ್ಕಳ:…