Featured

ಉಪಚುನಾವಣೆಗೆ ಟಿಕೆಟ್ ನಿರಾಕರಣೆ – ಬಿಜೆಪಿ ತೊರೆದ ಪರಿಕ್ಕರ್‌ ಪುತ್ರ ಉತ್ಪಲ್‌ ಪಣಜಿಯಿಂದ ಸ್ವತಂತ್ರ ಸ್ಪರ್ಧೆ – Vishwanews24

ಉಪಚುನಾವಣೆಗೆ ಟಿಕೆಟ್ ನಿರಾಕರಣೆ – ಬಿಜೆಪಿ ತೊರೆದ ಪರಿಕ್ಕರ್‌ ಪುತ್ರ ಉತ್ಪಲ್‌ ಪಣಜಿಯಿಂದ ಸ್ವತಂತ್ರ ಸ್ಪರ್ಧೆ – Vishwanews24

ಪಣಜಿ,: ಗೋವಾದ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರು ಬಿಜೆಪಿ ತೊರೆಯುವುದಾಗಿ ಶುಕ್ರವಾರ ಘೋಷಿಸಿದ್ದಾರೆ. ‘ಪಣಜಿ ಕ್ಷೇತ್ರದಿಂದ ಟಿಕೆಟ್‌ ನೀಡದೇ ಇರುವುದಕ್ಕೇ ಪಕ್ಷವನ್ನು ತೊರೆಯುತ್ತಿದ್ದೇನೆ.

ಪಣಜಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ’ ಎಂದು ಅವರು ಹೇಳಿದ್ದಾರೆ. 30 ವರ್ಷಗಳಿಂದ ಪಕ್ಷವನ್ನು ಕಟ್ಟಿ ಬೆಳೆಸಲಾಗಿದೆ. ನನ್ನ ತಂದೆಯವರ ನಿಧನದ ನಂತರ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಟಿಕೆಟ್ ನಿರಾಕರಿಸಲಾಯಿತು. ಪಕ್ಷಕ್ಕಾಗಿ ನಾನು ದುಡಿಯಬೇಕು ಎಂದು ಹೇಳಲಾಯಿತು. ಈಗ ಮತ್ತೆ ಅದೇ ಮಾತನ್ನು ಹೇಳುತ್ತಿದ್ದಾರೆ.

ಆದರೆ ಎರಡು ವರ್ಷಗಳ ಹಿಂದೆ ಪಕ್ಷಕ್ಕೆ ಬಂದವರಿಗೆ ಟಿಕೆಟ್ ನೀಡಲಾಗಿದೆ ಎಂದು ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪಣಜಿ ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಉತ್ಪಲ್ ಕೇಳಿಕೊಂಡಿದ್ದರು. ಅದನ್ನು ಬಿಜೆಪಿ ನಿರಾಕರಿಸಿತ್ತು. ಬದಲಿಗೆ ಬೇರೆ ಎರಡು ಕ್ಷೇತ್ರಗಳ ಆಯ್ಕೆ ನೀಡುವುದಾಗಿ ಹೇಳಿತ್ತು.

ಗೋವಾ ಬಿಜೆಪಿ ಉಸ್ತುವಾರಿ ದೇವೇಂದ್ರ ಫಡಣವೀಸ್ ಅವರು, ‘ಉತ್ಪಲ್‌ಗೆ ಆ ಸಾಮರ್ಥ್ಯವಿಲ್ಲ. ಅವರು ಪಕ್ಷಕ್ಕಾಗಿ ಇನ್ನೂ ದುಡಿಯಬೇಕು’ ಎಂದು ಹೇಳಿದ್ದರು. ‘ನನಗೆ ರಾಜಕೀಯ ಪಕ್ಷ ಎಂದು ಇದ್ದದ್ದು ಬಿಜೆಪಿ ಮಾತ್ರ. ಹೀಗಾಗಿ ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ’ ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

9 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

9 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

9 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

10 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

10 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

10 hours ago