ಶಿವಮೊಗ್ಗ: 15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್ ಸಿಗಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯಡಿಯೂರಪ್ಪ,, ರಾಜ್ಯದಲ್ಲಿ ಉಪಚುನಾವಣೆಗೆ ದಿನಾಂಕ ನಿಶ್ಚಯವಾಗಿದೆ. ಈ ಹಿಂದೆ 15 ಶಾಸಕರು ರಾಜೀನಾಮೆ ನೀಡಿ ಹೊರಬಂದಿದ್ದರು. ಅವರಿಗೆ ಪಕ್ಷದ ಟಿಕೆಟ್ ನೀಡಲು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ನಾನು ಚರ್ಚಿಸಿ ಈಗಾಗಲೇ ನಿರ್ಧಾರ ಮಾಡಿದ್ದೇವೆ. ಎಲ್ಲರಿಗೂ ಪಕ್ಷದಿಂದಲೇ ಟಿಕೆಟ್ ನೀಡಲಾಗುತ್ತದೆ ಎಂದರು.
ಅನರ್ಹ ಶಾಸಕರನ್ನು ನಿಲ್ಲಿಸಿ, ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ. ನಮ್ಮ ಸರ್ಕಾರ ಬರಲು ಕಾರಣರಾದವರ ಗೆಲುವಿಗೆ ಎಲ್ಲರೂ ಕೆಲಸ ಮಾಡುತ್ತೇವೆ. ಯಾರೂ ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಯಾರ ಹೇಳಿಕೆ ಬಗ್ಗೆಯೂ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದರು.
ಕಳೆದ ಬಾರಿ ಇದೀಗ ಅನರ್ಹ ಶಾಸಕರಾಗಿರುವ ವಿರುದ್ಧ ಸೋತಿದ್ದ ಬಿಜೆಪಿ ಮುಖಂಡರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುತ್ತೇವೆ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಗೆ ಸುಳಿವು ನೀಡಿದರು.
ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ ಉಡುಪಿ: ಕಾನೂನು…
USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ .. ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ ವಾಷಿಂಗ್ಟನ್:…
ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ…
ಹೋಟೆಲ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ ತಪಾಸಣೆಗೆ ಖಾದರ್ ಸೂಚನೆ ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ…
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…