ರಾಷ್ಟ್ರ ನ್ಯೂಸ್

ಉಪವಾಸನಿರತ ಹಾರ್ದಿಕ್‌ ಗೆ ನೀರು ಕೊಟ್ಟದ್ದು ಯಾರು? ಪರೀಕ್ಷೆ ಪ್ರಶ್ನೆ,ಇದೀಗ ವಿವಾದದ ಸುಳಿಯಲ್ಲಿ

ಅಹ್ಮದಾಬಾದ್‌ : ಪಾಟಿದಾರ್‌ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಈಚೆಗೆ 19 ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದ ಪಾಟಿದಾರ್‌ ನಾಯಕ ಹಾರ್ದಿಕ್‌ ಪಟೇಲ್‌ ಅವರಿಗೆ ‘ನಿರಶನವನ್ನು ಕೊನೆಗೊಳಿಸಲು ಯಾವ ನಾಯಕ ಅವರಿಗೆ ನೀರು ಕೊಟ್ಟರು’ ಎಂಬ ಪ್ರಶ್ನೆಯನ್ನು ಗಾಂಧೀನಗರ ಪುರಸಭೆಯ ಗುಮಾಸ್ತರ ಹುದ್ದೆಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕೇಳಲಾಗಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

ಈ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುವ ಹೊಣೆಗಾರಿಕೆಯನ್ನು ಗುಜರಾತ್‌ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಹೊರಗುತ್ತಿಗೆ ನೀಡಲಾಗಿತ್ತು. ಇದರಲ್ಲಿ ಯಾವುದೇ ಚುನಾಯಿತ ಪ್ರತಿನಿಧಿ ಶಾಮೀಲಾಗಿಲ್ಲ ಎಂದು ಮೇಯರ್‌ ಪ್ರವೀಣ್‌ ಭಾಯಿ ಪಟೇಲ್‌ ಮಾಧ್ಯಮಕ್ಕೆ ತಿಳಿಸಿದರು.

ಹಾರ್ದಿಕ್‌ ಪಟೇಲ್‌ ಉಪವಾಸ ಸತ್ಯಾಗ್ರಹ ಮುಗಿಸಲು ನೀರು ಕೊಟ್ಟ ನಾಯಕ ಯಾರು ಎಂಬ ಪ್ರಶ್ನೆಗೆ ಉತ್ತರವಾಗಿ ನಾಲ್ಕು ಆಯ್ಕೆಗಳಿದ್ದವು. ಅವೆಂದರೆ 1. ಶರದ್‌ ಯಾದವ್‌, 2. ಶತ್ರುಘ್ನ ಸಿನ್ಹಾ, 3. ಲಾಲು ಪ್ರಸಾದ್‌ ಯಾದವ್‌, 4. ವಿಜಯ್‌ ರೂಪಾಣಿ. ಸರಿಯಾದ ಉತ್ತರ ಶರದ್‌ ಯಾದವ್‌ (ಮಾಜಿ ಕೇಂದ್ರ ಸಚಿವ ಮತ್ತು ಜೆಡಿಯು ಮಾಜಿ ಮುಖ್ಯಸ್ಥ) ಎಂಬುದಾಗಿತ್ತು.

25ರ ಹರೆಯದ ಹಾರ್ದಿಕ್‌ ಅವರು ಕಳೆದ ಆಗಸ್ಟ್‌ 25ರಂದು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಸೆ.6ರಿಂದ ಅವರು ನೀರು ಸೇವಿಸುವುದನ್ನು ನಿಲ್ಲಿಸಿದ್ದರು. ಸೆ.7ರಂದು (ಉಪವಾಸದ 14ನೇ ದಿನ) ಹಾರ್ದಿಕ್‌ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಸೆ.8ರಂದು ಶರದ್‌ ಯಾದವ್‌ ಅವರು ಆಸ್ಪತ್ರೆಯಲ್ಲಿ ಹಾರ್ದಿಕ್‌ ಗೆ ಕುಡಿಯಲು ನೀರು ಕೊಟ್ಟಿದ್ದರು. ಸೆ.9ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕವೂ ತಮ್ಮ ನಿರಶನ ಸತ್ಯಾಗ್ರಹ ಮುಂದುವರಿಸಿದ್ದ ಹಾರ್ದಿಕ್‌ ಸೆ.12ರಂದು ಅದನ್ನು ಕೊನೆಗೊಳಿಸಿದ್ದರು.

ಜಾಹಿರಾತು: ಪಂಡೀತ್ ಸುದರ್ಶನ್ ಭಟ್

Vishwa News 24

Recent Posts

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

20 minutes ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

27 minutes ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

31 minutes ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

38 minutes ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

48 minutes ago

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

21 hours ago