Featured

ಉಪಸಭಾಪತಿ, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಎಂ.ಕೆ.ಪ್ರಾಣೇಶ್ ರಾಜೀನಾಮೆ – vishwanews24

ಕಾಂಗ್ರೆಸ್‌ ಪಾಲಾದ ಚಿಕ್ಕಮಗಳೂರು ಎಂಎಲ್‌ಸಿ ಸ್ಥಾನ ..

ಮರುಎಣಿಕೆಯಲ್ಲಿ ಬಿಜೆಪಿಗೆ ಸೋಲು ..

ಉಪಸಭಾಪತಿ, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಎಂ.ಕೆ.ಪ್ರಾಣೇಶ್ ರಾಜೀನಾಮೆ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಹಾಗೂ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಅವರು ತಮ್ಮ ಉಪಸಭಾಪತಿ ಹುದ್ದೆ ಹಾಗೂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಉದ್ದೇಶಿಸಿ ಬರೆದಿರುವ ರಾಜೀನಾಮೆ ಪತ್ರದಲ್ಲಿ, “ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿ ಹುದ್ದೆ ಮತ್ತು ಶಾಸಕ ಸ್ಥಾನಕ್ಕೆ ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ. ಸದರಿ ರಾಜೀನಾಮೆ ಪತ್ರವನ್ನು ಅಂಗೀಕರಿಸುವಂತೆ ಕೋರುತ್ತೇನೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ  :

ಆಗಸ್ಟ್ 1ರಂದು ದಿನಾಂಕಿತವಾಗಿರುವ ರಾಜೀನಾಮೆ ಪತ್ರಕ್ಕೆ ಎಂ.ಕೆ. ಪ್ರಾಣೇಶ್ ಅವರು ಸಹಿ ಹಾಕಿದ್ದು, ರಾಜೀನಾಮೆಯನ್ನು ಅಂಗೀಕರಿಸುವಂತೆ ಸಭಾಪತಿಯನ್ನು ಕೋರಿದ್ದಾರೆ.

ಶುಕ್ರವಾರ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ನಡೆದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ 9 ಮತಗಳ ಅಂತರದಿಂದ ಜಯಗಳಿಸಿದ್ದ ಹಿನ್ನೆಲೆಯಲ್ಲಿ, ಈ ರಾಜೀನಾಮೆ ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ. ರಾಜೀನಾಮೆ ಅಂಗೀಕಾರದ ಬಳಿಕ ಮುಂದಿನ ಸಂವಿಧಾನಾತ್ಮಕ ಪ್ರಕ್ರಿಯೆಗಳು ನಡೆಯಲಿವೆ.

Vishwa News 24

Recent Posts

ಭಾರಿಮಳೆ : ಮುಳ್ಳಯ್ಯನಗಿರಿಯಲ್ಲಿ ಗುಡ್ಡ ಕುಸಿತ ; ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಜಿಲ್ಲಾಡಳಿತ ಎಚ್ಚರಿಕೆ – vishwanews24

ಭಾರಿಮಳೆ : ಮುಳ್ಳಯ್ಯನಗಿರಿಯಲ್ಲಿ ಗುಡ್ಡ ಕುಸಿತ ; ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಜಿಲ್ಲಾಡಳಿತ ಎಚ್ಚರಿಕೆ ಚಿಕ್ಕಮಗಳೂರು: ರಾಜ್ಯದ ಅತ್ಯಂತ ಎತ್ತರದ…

7 minutes ago

ಮಂಗಳೂರು: 2018ರ ಸಾಮೂಹಿಕ ಅತ್ಯಾಚಾರ ಪ್ರಕರಣ ; ನಾಲ್ವರು ಅಪರಾಧಿಗಳಿಗೆ 20 ವರ್ಷಗಳ ಕಠಿಣ ಜೈಲುಶಿಕ್ಷೆ – vishwanews24

ಮಂಗಳೂರು: 2018ರ ಸಾಮೂಹಿಕ ಅತ್ಯಾಚಾರ ಪ್ರಕರಣ ; ನಾಲ್ವರು ಅಪರಾಧಿಗಳಿಗೆ 20 ವರ್ಷಗಳ ಕಠಿಣ ಜೈಲುಶಿಕ್ಷೆ ಮಂಗಳೂರು: 2018ರ ಸಾಮೂಹಿಕ…

14 minutes ago

ವಾಣಿಜ್ಯ ಸಿಲಿಂಡರ್ ಬೆಲೆ 200ರೂ. ಇಳಿಕೆ – vishwanews24

ವಾಣಿಜ್ಯ ಸಿಲಿಂಡರ್ ಬೆಲೆ 200ರೂ. ಇಳಿಕೆ ನವದೆಹಲಿ: ಬಹುದಿನಗಳ ಬಳಿಕ ವಾಣಿಜ್ಯ ಸಿಲಿಂಡರ್‌ ಬಳಕೆದಾರರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಬೆಂಗಳೂರು, ದೆಹಲಿ, ಕೋಲ್ಕತ್ತಾ…

35 minutes ago

ಗುರುಪುರ : ಆ. 3ರಿಂದ ಸೆ. 6ರವರೆಗೆ ವಜ್ರದೇಹಿ ಮಠದಲ್ಲಿ ಶ್ರೀಪಾದರ 27ನೇ ಚಾತುರ್ಮಾಸ್ಯ ವ್ರತಾಚರಣೆ -vishwanews24

ಗುರುಪುರ : ಆ. 3ರಿಂದ ಸೆ. 6ರವರೆಗೆ ವಜ್ರದೇಹಿ ಮಠದಲ್ಲಿ ಶ್ರೀಪಾದರ 27ನೇ ಚಾತುರ್ಮಾಸ್ಯ ವ್ರತಾಚರಣೆ ಗುರುಪುರ : ಶ್ರೀ…

19 hours ago

ನಾಳೆ (ಅಗಸ್ಟ್ 01 ಶನಿವಾರ) ರಂದು ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ರಕ್ತದಾನ ಶಿಬಿರ -vishwanews24

*ನಾಳೆ (ಅಗಸ್ಟ್ 01 ಶನಿವಾರ) ರಂದು ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ರಕ್ತದಾನ ಶಿಬಿರ* ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್,…

22 hours ago

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

4 days ago