ಉಪ್ಪಿನಂಗಡಿ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ನೆಲ್ಯಾಡಿ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂ.14 ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡ ಆರೋಪಿಯು ಫೋನ್ ಮೂಲಕ ಸಂಪರ್ಕ ಸಾಧಿಸಿಕೊಂಡು ಆತ್ಮೀಯತೆ ಬೆಳೆಸಿದ್ದಲ್ಲದೆ, ಕಳೆದ ಜು. 21 ರಂದು ಆಕೆಯನ್ನು ನೆಲ್ಯಾಡಿಗೆ ಬರಲು ಹೇಳಿ, ನೆಲ್ಯಾಡಿಗೆ ಬಂದ ಆಕೆಯನ್ನು ಪಿಕಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ, ಹಾಗೂ ಈ ವಿಚಾರವನ್ನು ಯಾರಿಗೂ ಹೇಳದಂತೆ ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಸಂತ್ರಸ್ತ ವಿದ್ಯಾರ್ಥಿನಿಯು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…