Featured

ಉಪ್ಪಿನಂಗಡಿ : ಒಂದು ತಿಂಗಳು ಮಗು ಸಹಿತ ಇಬ್ಬರು ಮಕ್ಕಳನ್ನು ಬಿಟ್ಟು ನಾಪತ್ತೆಯಾದ  ಅಲೆಮಾರಿ ದಂಪತಿ – Vishwanews24

ಉಪ್ಪಿನಂಗಡಿ : ಒಂದು ತಿಂಗಳು ಮಗು ಸಹಿತ ಇಬ್ಬರು ಮಕ್ಕಳನ್ನು ಬಿಟ್ಟು ನಾಪತ್ತೆಯಾದ  ಅಲೆಮಾರಿ ದಂಪತಿ

ಉಪ್ಪಿನಂಗಡಿ : ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳನ್ನ ಮನೆಯೊಂದರಲ್ಲಿ ಬಿಟ್ಟು ಅಲೆಮಾರಿ ದಂಪತಿಗಳು ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದ್ದು, ಸದ್ಯ ಈ ಮಕ್ಕಳನ್ನು ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಲಾಗಿದ್ದು, ಪಾಲಕರ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ತಾಲೂಕು ಕರಾಯ ಪರಿಸರದಲ್ಲಿ ಅಲೆಮಾರಿ ಜನಾಂಗದ ದಂಪತಿ ಬುಟ್ಟಿ ಹೆಣೆಯುವ ಕಾಯಕದೊಂದಿಗೆ ಆಗಾಗ ಕಾಣಿಸಿಕೊಂಡು ಪರಿಸರದ ನಿವಾಸಿಗರ ವಿಶ್ವಾಸಗಳಿಸಿದ್ದರು. ಮದ್ಯ ವ್ಯಸನಿಗಳಾದ ಇವರು ಅಲ್ಲಲ್ಲಿ ಮಲಗಿಕೊಂಡು ಅವ್ಯವಸ್ಥಿತ ಜೀವನ ನಡೆಸುತ್ತಿದ್ದರು. ದಂಪತಿಗೆ ದಿನೇಶ ಎಂಬ ನಾಲ್ಕು ವರ್ಷದ ಮಗನಿದ್ದು, ಒಂದು ತಿಂಗಳ ಹಿಂದೆಯಷ್ಟೇ ಹೆಣ್ಣು ಮಗು ಜನಿಸಿತ್ತು.

ಈ ಎರಡು ಮಕ್ಕಳನ್ನು ಜೂನ್ 2ರಂದು ಕರಾಯ ಗ್ರಾಮದ ಮನೆಯೊಂದರಲ್ಲಿ ಬಿಟ್ಟು ನಾವು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಹೋಗಿ ಬರುತ್ತೇವೆ ಎಂದು ಈ ದಂಪತಿ ತಿಳಿಸಿದ್ದರು. ಮಾನವೀಯತೆ ಮೆರೆದ‌ ಮನೆಯೊಡತಿ ಫಾತಿಮಾ ಅವರು ಇದಕ್ಕೆ ಒಪ್ಪಿಕೊಂಡಿದ್ದರು. ಆದರೆ ಆ ಬಳಿಕ ಈ ದಂಪತಿಯ ಪತ್ತೆಯಿರಲಿಲ್ಲ. ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳ ಲಾಲನೆ ಪಾಲನೆ ಮಾಡಿದ ಫಾತಿಮಾ ಅವರು 2 ದಿನ ಕಳೆದರೂ ಹೆತ್ತವರು ಕಾಣಿಸಿಕೊಳ್ಳದೇ ಹೋದಾಗ ಕಳವಳಗೊಂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳ ಗಮನಕ್ಕೆ ತಂದು ಮಕ್ಕಳನ್ನು ರವಿವಾರ ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

3 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

3 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago