ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ – vishwanews24

Featured, ದಕ್ಷಿಣ ಕನ್ನಡ

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.

ಕಾರ್ಕಳದ ನಕ್ರೆ ಗ್ರಾಮದ ಕುಟುಂಬವೊಂದು ಸುಬ್ರಹ್ಮಣ್ಯಕ್ಕೆ ವ್ಯಾಗನರ್ ಕಾರಿನಲ್ಲಿ ತೆರಳುತ್ತಿತ್ತು. ಉಪ್ಪಿನಂಗಡಿಯ ಕೂಟೇಲು ಸಮೀಪ ಕಾರು ಸಂಚರಿಸುತ್ತಿದ್ದ ವೇಳೆ ಅಡುಗೆ ಅನಿಲದ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆಯಿತು.

ಜೂ .5 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ : ಹವಾಮಾನ ಇಲಾಖೆ ಮುನ್ಸೂಚನೆ  – vishwanews24

ಪರಿಣಾಮ ಕಾರಿನಲ್ಲಿದ್ದ ಚಾಲಕ ದೀಪಕ್ (45), ಯಾತ್ರಾರ್ಥಿಗಳಾಗಿದ್ದ ಗುರುರಾಜ್ (46), ಧನುಷ್ (15), ಭಾರತಿ (48), ಗೀತಾ (55) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ ಚಾಲಕ ದಾಮೋದರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಘಟನೆ ಸಂಭವಿಸಿದಾಗ ಗಾಯಾಳುಗಳನ್ನು ನಜ್ಜುಗುಜ್ಜಾದ ಕಾರಿನಿಂದ ಹೊರಗೆಳೆಯಲಾಗಿದೆ. ಪ್ರಕರಣ ಪುತ್ತೂರು ಸಂಚಾರಿ ಠಾಣೆಯಲ್ಲಿ ದಾಖಲಿಸಲಾಗಿದೆ.

ನಾನು ಯಾವುದೇ ಸ್ಥಾನಮಾನ ಕೇಳಿಲ್ಲ, ಹೈಕಮಾಂಡ್ ಜವಾಬ್ದಾರಿ ವಹಿಸಿದರೆ ನಿಭಾಯಿಸುವೆ: ಯು.ಟಿ. ಖಾದರ್ – vishwanews24

 

Leave a Reply