Featured

ಉಪ್ಪಿನಂಗಡಿ ತಲವಾರ್ ದಾಳಿ ನಡೆಸಿದ ಆರೋಪಿಗಳನ್ನು ಬಂಧಿಸದಿದ್ದರೆ  ಡಿ.ಸಿ ಕಚೇರಿ ಚಲೋ ಪ್ರತಿಭಟನೆ : ವಿಶ್ವಹಿಂದೂ ಪರಿಷತ್ – Vishwanews24

ಉಪ್ಪಿನಂಗಡಿ ತಲವಾರ್ ದಾಳಿ ನಡೆಸಿದ ಆರೋಪಿಗಳನ್ನು ಬಂಧಿಸದಿದ್ದರೆ  ಡಿಸಿ ಕಚೇರಿ ಚಲೋ ಪ್ರತಿಭಟನೆ : ವಿಶ್ವಹಿಂದೂ ಪರಿಷತ್ – Vishwanews24

ಪುತ್ತೂರು : ಉಪ್ಪಿನಂಗಡಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭ ಪೊಲೀಸ್ ಇಲಾಖೆಯ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದರ ಆರೋಪಿಗಳ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದು ವಿಶ್ವಹಿಂದೂ ಪರಿಷತ್ ರಾಜ್ಯ ಸರಕಾರವನ್ನು ಒತ್ತಾಯಿಸಿದೆ.

ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವಹಿಂದೂ ಪರಿಷತ್ ನ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಪಿಎಫ್ಐ ಕಾರ್ಯಕರ್ತರು ಕೊಲೆಯತ್ನ ನಡೆಸಿದ ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಡಿಸೆಂಬರ್ 14 ರಂದು ಉಪ್ಪಿನಂಗಡಿ ಪೋಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸುತ್ತಾರೆ ಮತ್ತು ರಾತ್ರಿ ವೇಳೆ ಪೋಲೀಸ್ ಠಾಣೆಗೆ ಮುತ್ತಿಗೆ ಹಾಕಿ ಹಿರಿಯ ಪೋಲೀಸ್ ಅಧಿಕಾರಿಗಳ ಸೇರಿದಂತೆ ಪೋಲೀಸರ ಮೇಲೆ ಹಲ್ಲೆ ನಡೆಸುತ್ತಾರೆ ಎಂದರೆ ವ್ಯವಸ್ಥೆಗಳು ಎಲ್ಲಿ ಸಾಗುತ್ತಿದೆ ಎನ್ನುವ ಆತಂಕ ಸಾರ್ವಜನಿಕರಲ್ಲಿ ಮೂಡಲಾರಂಭಿಸಿದೆ ಎಂದರು.

ಪೋಲೀಸ್ ಠಾಣೆಗೆ ದಾಳಿ ಮಾಡಿದ ಪಿಎಫ್ಐ ಕಾರ್ಯಕರ್ತರ ಮೇಲೆ ದೇಶದ್ರೋಹದ ಕೇಸನ್ನು ತಕ್ಷಣವೇ ದಾಖಲಿಸಬೇಕೆಂದು ಒತ್ತಾಯಿಸಿದ ಅವರು ಉಪ್ಪಿನಂಗಡಿಯ ಮೀನು ಮಾರಾಟ ಮಾಡುತ್ತಿದ್ದವರ ಮೇಲೆ ತಲವಾರು ದಾಳಿ ನಡೆಸಿದ ಪ್ರಮುಖ ಆರೋಪಿಗಳನ್ನು ಪೋಲೀಸರು ಈವರೆಗೂ ಬಂಧಿಸಿಲ್ಲ. ಪೋಲೀಸರು ಕೂಡಲೇ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಹಿಂದೂ ಸಂಘಟನೆಗಳು ಸೇರಿ ಡಿ.ಸಿ. ಕಛೇರಿ ಚಲೋ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 days ago