ಉಪ್ಪಿನಂಗಡಿ : ದಾಂಪತ್ಯ ಕಲಹದಿಂದ ಮನನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳಲೆಂದು ನೇತ್ರಾವತಿ ಸೇತುವೆಯ ತಡೆಗೋಡೆ ಏರಿದಾಗ ಆಕೆಯ ಜೀವವನ್ನು ಅವರ ಸಾಕು ನಾಯಿ ಉಳಿಸಿರುವ ಘಟನೆಯೊಂದು ನಡೆದಿದೆ.
ಪಿಲಿಗೂಡು ನಿವಾಸಿ ಮಹಿಳೆ (36 ವರ್ಷ) ತನ್ನ ಪತಿಯೊಂದಿಗಿನ ಜಗಳದಿಂದ ನೊಂದು ಗುರುವಾರ ರಾತ್ರಿ ನಾಲ್ಕು ಕಿ.ಮೀ. ನಡೆದು ದೂರದ ನೇತ್ರಾವತಿ ಸೇತುವೆ ಬಂದಿದ್ದು, ಹಾರಲು ಯತ್ನ ಮಾಡುತ್ತಿರುವಾಗ, ಮನೆಯಿಂದಲೇ ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಸಾಕು ನಾಯಿ ಮಹಿಳೆಯ ಚೂಡಿದಾರವನ್ನು ಕಚ್ಚಿ ಹಿಡಿದು, ಬೊಗಳಲು ಪ್ರಾರಂಭಿಸಿದೆ. ಈ ಮೂಲಕ ರಸ್ತೆಯಲ್ಲಿ ಹೋಗುವವರ ಗಮನ ಸೆಳೆಯುವ ಪ್ರಯತ್ನ ಮಾಡಿದೆ. ಇದೇ ವೇಳೆ ಬೈಕ್ನಲ್ಲಿ ಬಂದ ವ್ಯಕ್ತಿಯೋರ್ವರು ಇದನ್ನು ಕಂಡು ಪರಿಚಯದ ಸಮಾಜ ಸೇವಕರೋರ್ವರ ಮೂಲಕ ಇನ್ನೇನು ನದಿಗೆ ಹಾರುವಂತಿದ್ದ ಮಹಿಳೆಯನ್ನು ರಕ್ಷಿಸಿದ್ದಾರೆ.
ಬೆಂಗಳೂರು ಮೂಲದ ಈ ಮಹಿಳೆ ಅಲ್ಲಿಯೇ ಕೆಲಸ ಮಾಡುತ್ತಿದ್ದ ಪಿಲಿಗೂಡಿನ ಯುವಕನನ್ನು ಪ್ರೀತಿಸಿ ಮದುವೆಯಾಗಿ ಸ್ವಾಭಿಮಾನದ ಜೀವನ ನಡೆಸುತ್ತಿದ್ದರು . 16 ವರ್ಷದಿಂದ ನೆಮ್ಮದಿಯಾಗಿದ್ದ ಸಂಸಾರದಲ್ಲಿ ಪತಿ ಮತ್ತು ಪತ್ನಿ ನಡುವೆ ವಿರಸ ಮೂಡಿತ್ತು. ಗುರುವಾರ ನೊಂದುಕೊಂಡ ಮಹಿಳೆ ಜೀವ ತ್ಯಜಿಸುವ ನಿರ್ಧಾರ ಮಾಡಿ ಹೊರಟಿದ್ದಾಗ ನಾಯಿ ಕೂಡ ಹಿಂಬಾಲಿಸಿಕೊಂಡು ಬಂದಿತ್ತು. ಮಹಿಳೆ ಸೇತುವೆಯ ಮೇಲೇರಲು ಯತ್ನಿಸುತ್ತಿದ್ದಂತೆ ನಾಯಿ ಅಪಾಯವನ್ನು ಅರಿತು ಚೂಡಿದಾರವನ್ನು ಕಚ್ಚಿ ಎಳೆದು ಜೋರಾಗಿ ಬೊಗಳುತ್ತಾ ಇತರರ ಗಮನ ಸೆಳೆದು ರಕ್ಷಿಸಿತ್ತು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…