Featured

ಉಪ್ಪಿನಂಗಡಿ ಮಹಿಳೆ ಕೊಲೆ ಪ್ರಕರಣ: ಆರೋಪಿ ಬಾಲಕ 15 ದಿನ ರಿಮಾಂಡ್ ಹೋಮ್ ಗೆ – vishwanews24

ಉಪ್ಪಿನಂಗಡಿ ಮಹಿಳೆ ಕೊಲೆ ಪ್ರಕರಣ: ಆರೋಪಿ ಬಾಲಕ 15 ದಿನ ರಿಮಾಂಡ್ ಹೋಮ್ ಗೆ

ಉಪ್ಪಿನಂಗಡಿ,: ಇಲ್ಲಿಗೆ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಭಾನುವಾರ ತಡರಾತ್ರಿ ಕುತ್ತಿಗೆ ಹಿಸುಕಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಪ್ರಾಪ್ತ ವಯಸ್ಕ ಬಾಲಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳಾವಧಿಗೆ ರಿಮಾಂಡ್ ಹೋಮ್ ಗೆ ಕಳುಹಿಸಿದೆ.

ಹೇಮಾವತಿ ಅವರ ಮನೆಯಲ್ಲಿ ಘಟನೆಯ ರಾತ್ರಿ ತಂಗಿದ್ದ ಅಕ್ಕನ ಮಗ, ಹತ್ತನೇ ತರಗತಿ ವಿದ್ಯಾರ್ಥಿ, ಅಪ್ರಾಪ್ತ ಬಾಲಕ ಹೇಮಾವತಿ ಮಲಗಿದಲ್ಲಿಗೆ ಹೋಗಿ ದೇಹ ಸುಖ ಬಯಸಿದ್ದು, ಇದಕ್ಕೆ ಹೇಮಾವತಿಯವರು ಪ್ರತಿರೋಧ ವ್ಯಕ್ತಪಡಿಸಿದ್ದರೆನ್ನಲಾಗಿದೆ. ನಾಳೆ ತನ್ನ ಕೃತ್ಯವನ್ನು ನೆರೆಹೊರೆಯವರಿಗೆ ತಿಳಿಸಿದರೆ ತಾನು ಅವಮಾನಿತನಾಗುವ ಸಾಧ್ಯತೆ ಇದೆ ಎಂದು ಅಂಜಿಕೆಯಿಂದ ಈ ಬಾಲಕ ಆಕೆಯನ್ನು ಕೊಲ್ಲುವ ನಿರ್ಧಾರ ತಾಳಿದ್ದ. ಸುಮಾರು ಅರ್ಧ ಗಂಟೆಯ ಬಳಿಕ ನಿದ್ರೆಗೆ ಜಾರಿದ್ದ ಚಿಕ್ಕಮ್ಮನ ಕುತ್ತಿಗೆ ಹಿಸುಕಿ ಉಸಿರುಗಟ್ಟಿಸಿ ಕೊಲೆಗೈದಿದ್ದ. ಚಿಕ್ಕಮ್ಮ ಮೃತಪಟ್ಟಿರುವುದು ದೃಢವಾದೊಡನೆ ಆಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ತಾನೇ ಮೊದಲಾಗಿ ತನ್ನ ತಂದೆಗೆ ತಿಳಿಸಿ ಪಾರಾಗಲು ಯತ್ನಿಸಿದ್ದ. ಆದರೆ ಕುತ್ತಿಗೆ ಹಿಸುಕಿದ ವೇಳೆ ಆಕೆ ಪ್ರಾಣ ರಕ್ಷಣೆಗಾಗಿ ಬಾಲಕನಿಗೆ ಪರಚಿದ್ದು, ಈ ಪರಚಿದ ಗಾಯವೇ ಪೊಲೀಸರು ಸಾಕ್ಷಿಯಾಗಿತ್ತು.

ಬಂಟ್ವಾಳ ತಾಲೂಕು ಮಾಣಿ ಗ್ರಾಮದ ವಿಠಲ ಪೈ ಯಾನೆ ಶೈಲೇಶ್ ಎಂಬವರನ್ನು ವಿವಾಹವಾಗಿದ್ದ ಹೇಮಾವತಿಯವರು ಗಂಡನ ಕುಡಿತದ ಚಟದಿಂದ ಬೇಸತ್ತು ಗಂಡನಿಂದ ದೂರವಾಗಿದ್ದರು. ಹಾಗೂ ವಿವಾಹ ವಿಚ್ಚೇದನಕ್ಕೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಅದು ವಿಚಾರಣಾ ಹಂತದಲ್ಲಿತ್ತೆನ್ನಲಾಗಿದೆ. ಹೋಟೇಲೊಂದರಲ್ಲಿ ಕೆಲಸ ಮಾಡುತ್ತಾ ಜೀವನ ನಿರ್ವಹಣೆ ಮಾಡುತ್ತಿದ್ದ ಈಕೆ ತನ್ನ ತಾಯಿ ಮನೆಯಲ್ಲಿ ವಾಸ್ತವ್ಯವನ್ನು ಹೊಂದಿದ್ದು, ಮಗನಂತಿದ್ದ ಅಕ್ಕನ ಮಗನೇ ಮೃಗೀಯ ವರ್ತನೆ ತೋರಿ ಆಕೆಯ ಸಾವಿಗೆ ಕಾರಣವಾಗಿರುವುದು ಮಾತ್ರ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

13 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

16 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

16 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago