Featured

ಉಪ್ಪಿನಂಗಡಿ :ಮುಸ್ಲಿಂ ಮನೆಯಲ್ಲಿ ಹಿಂದೂ ಯುವತಿಯನ್ನು ಅಕ್ರಮವಾಗಿ ಕೂಡಿಹಾಕಿದ ಆರೋಪ; ಪೊಲೀಸರಿಂದ ಪರಿಶೀಲನೆ – Vishwanews24

ಉಪ್ಪಿನಂಗಡಿ :ಮುಸ್ಲಿಂ ಮನೆಯಲ್ಲಿ ಹಿಂದೂ ಯುವತಿಯನ್ನು ಅಕ್ರಮವಾಗಿ ಕೂಡಿಹಾಕಿದ ಆರೋಪ; ಪೊಲೀಸರಿಂದ ಪರಿಶೀಲನೆ..

ತಾನು ಸ್ವ ಇಚ್ಚೆಯಿಂದ ನನ್ನ ಗೆಳತಿ ಮನೆಗೆ ಬಂದಿರುವುದಾಗಿ ಯುವತಿ ಹೇಳಿಕೆ..

ಉಪ್ಪಿನಂಗಡಿ: ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ಮುಸ್ಲಿಮ್‌ ಸಮುದಾಯದ ಮನೆಯಲ್ಲಿ ಹಿಂದೂ ಯುವತಿಯನ್ನು ಅಕ್ರಮವಾಗಿ ಕೂಡಿ ಹಾಕಲಾಗಿದೆ ಎಂಬ ಮಾಹಿತಿಯಿಂದಾಗಿ ಮಂಗಳವಾರ ತಡ ರಾತ್ರಿ ಪೊಲೀಸ್‌ ಕಾರ್ಯಾಚರಣೆ ನಡೆಸಿ ಯುವತಿಯನ್ನು ವಶಕ್ಕೆ ಪಡೆದು ಆಕೆಯ ಪೋಷಕರ ಮನೆಗೆ ಕಳುಹಿಸಿಕೊಟ್ಟ ಘಟನೆ ಉಪ್ಪಿನಂಗಡಿಯಿಂದ ವರದಿಯಾಗಿದೆ.

ಇದನ್ನೂ ಓದಿ :

ಹಿಂದೂ ಯುವತಿಯೊಬ್ಬಳು ಪಿಲಿಗೂಡಿನ ಸಂಶುದ್ದೀನ್‌ ಎಂಬಾತನ ಮನೆಯಲ್ಲಿ ಅಕ್ರಮ ವಶದಲ್ಲಿದ್ದಾಳೆ ಎಂಬ ಮಾಹಿತಿಯನ್ನು ಸ್ಥಳೀಯ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ತಿಳಿಸಿದ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಠಾಣಾ ಪೊಲೀಸರು ರಾತ್ರಿ ಕಾರ್ಯಾಚರಣೆ ನಡೆಸಿ ಆಕೆಯನ್ನು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿದಾಗ, ತಾನು ಸ್ವ ಇಚ್ಚೆಯಿಂದ ನನ್ನ ಗೆಳತಿ ಮನೆಗೆ ಬಂದಿರುವುದಾಗಿ ತಿಳಿಸಿದ ಕಾರಣಕ್ಕೆ ಆಕೆಯಿಂದ ಹೇಳಿಕೆ ಪಡೆದು ಆಕೆಯ ಹೆತ್ತವರ ಮನೆಗೆ ಕಳುಹಿಸಿಕೊಡಲಾಗಿತ್ತು. ಯುವತಿ ಮೂಲತಃ ಚಿಕ್ಕಮಗಳೂರು ಭಾಗದವಳು ಎಂದು ತಿಳಿದು ಬಂದಿದೆ.

ಈ ವಿದ್ಯಮಾನದ ಬೆನ್ನಿಗೆಯೇ ಸಂಶುದ್ದೀನ್‌ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ರಕ್ಷಿತ್‌, ಯಶೋಧರ, ಕಾರ್ತಿಕ್‌, ಹರೀಶ್‌ , ಬಾಬು, ದೇವರಾಜ್‌ ಮತ್ತಿತರರು ತನ್ನ ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ತನ್ನಲ್ಲಿ ಹಾಗೂ ತನ್ನ ದೊಡ್ಡಮ್ಮನಲ್ಲಿ ನಿಮ್ಮ ಮನೆಯಲ್ಲಿ ಯಾರಾದರೂ ಹಿಂದೂ ಯುವತಿ ಇದ್ದಾರೆಯಾ ಎಂದು ಪ್ರಶ್ನಿಸಿದ್ದು, ತಾನು ತನ್ನ ಪತ್ನಿಯ ಗೆಳತಿಯಾದ ಸುಷ್ಮಾ ಆಲಿಯಾಸ್‌ ಆಯಿಷಾಳು ಮನೆಯಲ್ಲಿ ಇರುವುದನ್ನು ತಿಳಿಸಿದಾಗ ತಮಗೆ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ದೂರಿನನ್ವಯ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago