ಉಪ್ಪಿನಂಗಡಿ: ಕೊನೆಗೂ ಉಪ್ಪಿನಂಗಡಿ ಹಿಜಬ್ ವಿವಾದ ಸುಖಾಂತ್ಯ ಕಾಣುವು ಎಲ್ಲಾ ಲಕ್ಷಣ ಕಂಡು ಬಂದಿದ್ದು. ಇದೀಗ 46 ವಿಧ್ಯಾರ್ಥಿನಿಯರು ಕಾಲೇಜಿನ ಸಮವಸ್ತ್ರ ನಿಯಮಾವಳಿಗೆ ಒಳಪಟ್ಟು ಹಿಜಬ್ ತೆಗೆದು ತರಗತಿಗೆ ಪ್ರವೇಶಿಸಿದ್ದಾರೆ.
ಹಿಜಾಬ್ ವಿಚಾರವಾಗಿ ಪ್ರತಿಭಟನೆ ನಡೆಸಿ ಕಾಲೇಜಿನಿಂದ ಸಸ್ಪೆಂಡ್ ಆಗಿದ್ದ ಆರು ವಿಧ್ಯಾರ್ಥಿನಿಯರು ನಿನ್ನೆ ತರಗತಿಗೆ ಬಂದಿದ್ದು, ಕಾಲೇಜಿನ ಸಮವಸ್ತ್ರ ನಿಯಮಾಳಿಯನ್ನು ಉಲ್ಲಂಘಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದು ಕೊಟ್ಟಿದ್ದಾರೆ.
ಈ ಹಿನ್ನಲೆ ಇವರ ಮೇಲಿನ ನಿರ್ಬಂಧವನ್ನು ಹಿಂಪಡೆದ ಕಾಲೇಜು ಆಡಳಿಕ ಮಂಡಳಿ ಅವರಿಗೆ ತರಗತಿ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದೆ. ಅಲ್ಲದೆ 29 ಮಂದಿ ಹಾಗೂ ಕಾಲೇಜಿಗೂ ಬರದೆ, ಪ್ರತಿಭಟನೆಯಲ್ಲೂ ಪಾಲ್ಗೊಳ್ಳದೆ ಅಂತರ ಕಾಯ್ದುಕೊಂಡಿದ್ದ 11 ಮಂದಿ ವಿದ್ಯಾರ್ಥಿನಿಯರು ಸೇರಿ ಒಟ್ಟು 46 ವಿದ್ಯಾರ್ಥಿನಿಯರು ಬುಧವಾರ ಸಮವಸ್ತ್ರ ಧರಿಸಿ, ತರಗತಿಗೆ ಹಾಜರಾಗಿದ್ದಾರೆ.
ಈ ನಡುವೆ ಕಳೆದ ವಾರ ಪ್ರತಿಭಟನೆಯಲ್ಲಿ ಭಾಗವಹಿಸಿ ಅಮಾನತು ಆಗಿರುವ 24 ವಿದ್ಯಾರ್ಥಿನಿಯರು ಕಾಲೇಜಿಗೆ ಬಂದಿಲ್ಲ. ಕಾಲೇಜಿನಲ್ಲಿ ಒಟ್ಟು 101 ಮುಸ್ಲಿಂ ವಿದ್ಯಾರ್ಥಿನಿಯರು ಇದ್ದು, ಈ ಪೈಕಿ 46 ವಿದ್ಯಾರ್ಥಿನಿಯರು ತರಗತಿಗೆ ಹಾಜರಾದಂತಾಗಿದೆ. ಉಳಿದ ವಿದ್ಯಾರ್ಥಿನಿಯರು ಗುರುವಾರದಿಂದ ಕಾಲೇಜಿಗೆ ಬರಬಹುದೆಂಬ ನಿರೀಕ್ಷೆಯಲ್ಲಿ ಉಪನ್ಯಾಸಕರು ಇದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…