Featured

ಉಪ್ಪಿನಂಗಡಿ ಹಿಜಾಬ್ ವಿವಾದ : 24 ವಿದ್ಯಾರ್ಥಿನಿಯರಿಗೆ 7 ದಿನಗಳ ಕಾಲ ತರಗತಿಗೆ ನಿರ್ಬಂಧ – Vishwanews24

ಉಪ್ಪಿನಂಗಡಿ ಹಿಜಾಬ್ ವಿವಾದ;  24 ವಿದ್ಯಾರ್ಥಿನಿಯರಿಗೆ 7 ದಿನಗಳ ಕಾಲ ತರಗತಿಗೆ ನಿರ್ಬಂಧ

ಉಪ್ಪಿನಂಗಡಿ: ಕಳೆದ ಕೆಲ ದಿನಗಳಿಂದ ಹಿಜಾಬ್ ವಿಚಾರವಾಗಿ ನಾನಾ ಘಟನಾವಳಿಗೆ ಕಾರಣವಾಗುತ್ತಿದ್ದ ಉಪ್ಪಿನಂಗಡಿಯ ಸರಕಾರಿ ಪುಥಮ ದರ್ಜೆ ಕಾಲೇಜಿನಲ್ಲಿ ಸೋಮವಾರವೂ ಹಿಜಾಬ್ ಧರಿಸಲು ವಿದ್ಯಾರ್ಥಿನಿಯರಿಗೆ 1 ವಾರ ತರಗತಿಗೆ ನಿರ್ಬಂಧ ಹೇರಲಾಗಿದೆ.
ಕಾಲೇಜಿನ ಪ್ರಾಂಶುಪಾಲ ಶೇಖರ್ ಎಷ್ಟೇ ವಿನಂತಿಸಿಕೊಂಡರೂ ತರಗತಿ ಧಿಕ್ಕರಿಸಿದ 24 ಮಂದಿ ವಿದ್ಯಾರ್ಥಿನಿಯರಿಗೆ ಒಂದು ವಾರದ ಕಾಲ ತರಗತಿ ನಿರ್ಬಂಧ ವಿಧಿಸಲಾಗಿದೆ. ಕಾಲೇಜಿನಲ್ಲಿ ನಡೆಯುತ್ತಿರುವ ಅಹಿತಕರ ಘಟನಾವಳಿಯ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ನಿರ್ದೇಶಕಿ ಸೋಮವಾರದಂದು ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಅಹವಾಲನ್ನು ಆಲಿಸಿದರು. ಅಷ್ಟೇ ಅಲ್ಲದೆ ತರಗತಿಗೆ ಹಾಜರಾಗಿ ಕಲಿಕಾ ಪ್ರಕ್ರಿಯೆಯಲ್ಲಿ ಭಾಗಿಯಾಗಯವಂತೆ ವಿದ್ಯಾರ್ಥಿನಿಯರಿಗೆ ವಿನಂತಿಸಿದರು.
ಆದರೆ ಅದ್ಯಾವುದಕ್ಕೂ ಮಾನ್ಯತೆ ನೀಡದ ವಿದ್ಯಾರ್ಥಿನಿಯರು ಹಿಜಾಬ್‌ನೊಂದಿಗೆ ಕಾಲೇಜು ಪುವೇಶಿಸಲು ಹಠ ಹಿಡಿದರು. ಈ ಹಿನ್ನೆಲೆಯಲ್ಲಿ ಸೋಮವಾರದಂದು ಡ್ರೆಸ್ಸಿಂಗ್ ರೂಮಿನಲ್ಲೂ ಇವರಿಗೆ ರಿಕಾಣಿ ಹೂಡಲು ಅವಕಾಶ ನಿರಾಕರಿಸಲಾಗಿತ್ತು. ದಿನವಿಡೀ ನಡೆದ ಪ್ರಹಸನದ ಬಳಿಕ ಸಂಜೆ ವೇಳೆಗೆ ಕಾಲೇಜಿನ ಉಪನ್ಯಾಸಕರ ಸಭೆ ಕರೆದ ಕಾಲೇಜು ಪ್ರಾಂಶುಪಾಲ ಶೇಖರ್ ಅವರು ರಾಜ್ಯ ಉಚ್ಚ ನ್ಯಾಯಾಲಯದ ತೀರ್ಪು, ಸರಕಾರದ ಸುತ್ತೋಲೆ, ಕಾಲೇಜು ಅಭಿವೃದ್ಧಿ ಸಮಿತಿ ಕೈಗೊಂಡ ನಿರ್ಣಯದ ಆಧಾರದಲ್ಲಿ ಸಮವಸ್ತ್ರ ನಿಯಮಾವಳಿಯನ್ನು ಉಲ್ಲಂಘಿಸುತ್ತಾ ಕಾಲೇಜಿನ ಕಲಿಕಾ ವಾತಾವರಣವನ್ನು ಹಾನಿಗೊಳಿಸುತ್ತಿರುವ 24 ವಿದ್ಯಾರ್ಥಿನಿಯರಿಗೆ ಮುಂದಿನ ಒಂದ ವಾರದ ಕಾಲ ತರಗತಿ ನಿರ್ಬಂಧ ವಿಧಿಸಿ ನಿರ್ಣಯ ಕೈಗೊಂಡರು. ಇದೇ ವಿವಾದಕ್ಕೆ ಸಂಬಂಧ ಈ ಹಿಂದೆಯೇ 7 ಮಂದಿ ವಿದ್ಯಾರ್ಥಿಯರಿಗೆ ತರಗತಿ ನಿರ್ಬಂಧ ವಿಧಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

7 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

8 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

8 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

8 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

8 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

10 hours ago