ಬೆಂಗಳೂರು: ಉಪ ಚುನಾವಣೆಯಲ್ಲಿ ಹೊರಗಿನವರಿಗೆ ಟಿಕೆಟ್ ನೀಡುವುದಿಲ್ಲ. ಬದಲಾಗಿ ಪಕ್ಷದ ನಿಷ್ಠಾವಂತರು ಹಾಗೂ ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತೇವೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.
ಹೊಸಕೋಟೆ ಮತ್ತು ಕೆ.ಆರ್.ಪುರ ಕ್ಷೇತ್ರಗಳಿಂದ ಸ್ಪರ್ಧೆಗೆ ಬಿಜೆಪಿಯ ಶರತ್ ಬಚ್ಚೇಗೌಡ, ನಂದೀಶ್ ರೆಡ್ಡಿ ಅವರನ್ನು ಕಾಂಗ್ರೆಸ್’ಗೆ ಕರೆತರುವ ಪ್ರಯತ್ನ ನಡೆದಿದೆ ಎಂಬ ಮಾತುಗಳಿವೆಯಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಬೇರೆ ಪಕ್ಷಗಳ ಯಾವುದೇ ನಾಯಕರ ಸಂಪರ್ಕಿಸುವ ಪ್ರಯತ್ನವನ್ನು ಮಾಡಿಲ್ಲ. ಅದೆಲ್ಲಾ ಊಹಾಪೋಹವಷ್ಟೇ. ನಾವು ಯಾರನ್ನೋ ಎಲ್ಲಿಂದಲ್ಲೇ ಕರೆತಂದು ಟಿಕೆಟ್ ಕೊಡುವುದಿಲ್ಲ. ನಮ್ಮದೇ ಪಕ್ಷದ ನಿಷ್ಠಾವಂತ ಹಾಗೂ ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗಳನ್ನು ಅಂತಿಗೊಳಿಸಿ ಟಿಕೆಟ್ ನೀಡುತ್ತೇವೆಂದು ತಿಳಿಸಿದ್ದಾರೆ.
15 ವಿಧಾನಸಭಾ ಕ್ಷೇತ್ರಗಳ ಪೈಕಿ ಈ ಹಿಂದೆ ಕಾಂಗ್ರೆಸ್ 12 ಕ್ಷೇತ್ರಗಳಲ್ಲಿ ಗೆಲವು ಸಾಧಿಸಿತ್ತು. ಅದರಲ್ಲಿ ಮೂರು ಕ್ಷೇತ್ರಗಳು ಜೆಡಿಎಸ್’ಗೆ ಸೇರಿದ್ದಾಗಿದೆ.
ನಾಮಪತ್ರ ಸಲ್ಲಿಕೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಕಾಂಗ್ರೆಸ್ ಅಂತಿಮಗೊಳಿಸಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…