ಬೆಂಗಳೂರು: ಉಪ ಚುನಾವಣೆಯಲ್ಲಿ ಹೊರಗಿನವರಿಗೆ ಟಿಕೆಟ್ ನೀಡುವುದಿಲ್ಲ. ಬದಲಾಗಿ ಪಕ್ಷದ ನಿಷ್ಠಾವಂತರು ಹಾಗೂ ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತೇವೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.
ಹೊಸಕೋಟೆ ಮತ್ತು ಕೆ.ಆರ್.ಪುರ ಕ್ಷೇತ್ರಗಳಿಂದ ಸ್ಪರ್ಧೆಗೆ ಬಿಜೆಪಿಯ ಶರತ್ ಬಚ್ಚೇಗೌಡ, ನಂದೀಶ್ ರೆಡ್ಡಿ ಅವರನ್ನು ಕಾಂಗ್ರೆಸ್’ಗೆ ಕರೆತರುವ ಪ್ರಯತ್ನ ನಡೆದಿದೆ ಎಂಬ ಮಾತುಗಳಿವೆಯಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಬೇರೆ ಪಕ್ಷಗಳ ಯಾವುದೇ ನಾಯಕರ ಸಂಪರ್ಕಿಸುವ ಪ್ರಯತ್ನವನ್ನು ಮಾಡಿಲ್ಲ. ಅದೆಲ್ಲಾ ಊಹಾಪೋಹವಷ್ಟೇ. ನಾವು ಯಾರನ್ನೋ ಎಲ್ಲಿಂದಲ್ಲೇ ಕರೆತಂದು ಟಿಕೆಟ್ ಕೊಡುವುದಿಲ್ಲ. ನಮ್ಮದೇ ಪಕ್ಷದ ನಿಷ್ಠಾವಂತ ಹಾಗೂ ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗಳನ್ನು ಅಂತಿಗೊಳಿಸಿ ಟಿಕೆಟ್ ನೀಡುತ್ತೇವೆಂದು ತಿಳಿಸಿದ್ದಾರೆ.
15 ವಿಧಾನಸಭಾ ಕ್ಷೇತ್ರಗಳ ಪೈಕಿ ಈ ಹಿಂದೆ ಕಾಂಗ್ರೆಸ್ 12 ಕ್ಷೇತ್ರಗಳಲ್ಲಿ ಗೆಲವು ಸಾಧಿಸಿತ್ತು. ಅದರಲ್ಲಿ ಮೂರು ಕ್ಷೇತ್ರಗಳು ಜೆಡಿಎಸ್’ಗೆ ಸೇರಿದ್ದಾಗಿದೆ.
ನಾಮಪತ್ರ ಸಲ್ಲಿಕೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಕಾಂಗ್ರೆಸ್ ಅಂತಿಮಗೊಳಿಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…