ಬೆಂಗಳೂರು: ಉಪ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಬೆಂಬಲದಲ್ಲಿ ಬಿಜೆಪಿಯ ಎಂ.ಕೆ. ಪ್ರಾಣೇಶ್ ನಾಮ ಪತ್ರ ಸಲ್ಲಿಸಿದರು.. ಆ ಮೂಲಕ, ಬಿಜೆಪಿ– ಜೆಡಿಎಸ್ ನಡುವೆ ಮತ್ತೊಂದು ಸುತ್ತಿನ ‘ಮೈತ್ರಿ’ ಆರಂಭಗೊಂಡಿದೆ.
ಬಿಜೆಪಿ ಸದಸ್ಯ ಎಂ.ಕೆ ಪ್ರಾಣೇಶ್ ನಾಮಪತ್ರ ಸಲ್ಲಿಕೆ ವೇಳೆ ಜೆಡಿಎಸ್ನ ಬಸವರಾಜ ಹೊರಟ್ಟಿ, ಕೋನರೆಡ್ಡಿ ಉಪಸ್ಥಿತತರಿದ್ದರು.
ಉಪಸಭಾಪತಿ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಸಿ.ಕೊಂಡಯ್ಯ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಪರಿಷತ್ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ ,ಮುಖ್ಯ ಸಚೇತಕ ನಾರಾಯಣ್ ಸ್ವಾಮಿ, ಬಿಕೆ ಹರೀಪ್ರಸಾದ್ ಉಪಸ್ಥಿತರಿದ್ದರು.
ಜೆಡಿಎಸ್ ಮುಖಂಡ ಎಸ್.ಎಲ್. ಧರ್ಮೇಗೌಡರ ನಿಧನದಿಂದ ಉಪ ಸಭಾಪತಿ ಸ್ಥಾನ ತೆರವಾಗಿತ್ತು. ಸಭಾಪತಿ ಸ್ಥಾನ ಜೆಡಿಎಸ್ನ ಬಸವರಾಜ ಹೊರಟ್ಟಿ ಪಾಲಾಗಲಿದೆ.
ವಿಧಾನ ಪರಿಷತ್ನಲ್ಲಿ ಆಡಳಿತಾರೂಢ ಬಿಜೆಪಿ ಪ್ರಾಬಲ್ಯ ಹೊಂದಿಲ್ಲದಿರುವುದರಿಂದ ಮಸೂದೆಗಳು ಅಂಗೀಕಾರವಾಗುವಲ್ಲಿ ಜೆಡಿಎಸ್ ಜೊತೆಗಿನ ಈ ಮೈತ್ರಿ ನೆರವಿಗೆ ಬರಲಿದೆ.
ಪರಿಷತ್ ನಲ್ಲಿ 31 ಸದಸ್ಯರನ್ನು ಹೊಂದುವ ಮೂಲಕ ಬಿಜೆಪಿ ಅತಿ ದೊಡ್ಡ ಪಕ್ಷವಾಗಿದ್ದರೂ 75 ಸದಸ್ಯ ಬಲದ ಸದನದಲ್ಲಿ ಜೆಡಿಎಸ್ ನ 13 ಸದಸ್ಯರ ಬೆಂಬಲ ಈಗಲೂ ಅಗತ್ಯವಾಗಿದೆ. ಕಾಂಗ್ರೆಸ್ನ 28, ಪಕ್ಷೇತರ ಒಬ್ಬರು ಇದ್ದಾರೆ. ಒಂದು ಸ್ಥಾನ ಈ ಖಾಲಿ ಇದೆ. ಸಭಾಪತಿ ಸ್ಥಾನವನ್ನು ಬಯಸಿರುವ ಜೆಡಿಎಸ್, ಬಿಜೆಪಿಗೆ ವಿಷಯಾಧಾರಿತ ಬೆಂಬಲ ನೀಡುವುದಾಗಿ ಮಂಗಳವಾರ ನಡೆದ ಸಭೆಯಲ್ಲಿ ನಿರ್ಧರಿಸಿತ್ತು.
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…