ಬೆಂಗಳೂರು: ಉಪ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಬೆಂಬಲದಲ್ಲಿ ಬಿಜೆಪಿಯ ಎಂ.ಕೆ. ಪ್ರಾಣೇಶ್ ನಾಮ ಪತ್ರ ಸಲ್ಲಿಸಿದರು.. ಆ ಮೂಲಕ, ಬಿಜೆಪಿ– ಜೆಡಿಎಸ್ ನಡುವೆ ಮತ್ತೊಂದು ಸುತ್ತಿನ ‘ಮೈತ್ರಿ’ ಆರಂಭಗೊಂಡಿದೆ.
ಬಿಜೆಪಿ ಸದಸ್ಯ ಎಂ.ಕೆ ಪ್ರಾಣೇಶ್ ನಾಮಪತ್ರ ಸಲ್ಲಿಕೆ ವೇಳೆ ಜೆಡಿಎಸ್ನ ಬಸವರಾಜ ಹೊರಟ್ಟಿ, ಕೋನರೆಡ್ಡಿ ಉಪಸ್ಥಿತತರಿದ್ದರು.
ಉಪಸಭಾಪತಿ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಸಿ.ಕೊಂಡಯ್ಯ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಪರಿಷತ್ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ ,ಮುಖ್ಯ ಸಚೇತಕ ನಾರಾಯಣ್ ಸ್ವಾಮಿ, ಬಿಕೆ ಹರೀಪ್ರಸಾದ್ ಉಪಸ್ಥಿತರಿದ್ದರು.
ಜೆಡಿಎಸ್ ಮುಖಂಡ ಎಸ್.ಎಲ್. ಧರ್ಮೇಗೌಡರ ನಿಧನದಿಂದ ಉಪ ಸಭಾಪತಿ ಸ್ಥಾನ ತೆರವಾಗಿತ್ತು. ಸಭಾಪತಿ ಸ್ಥಾನ ಜೆಡಿಎಸ್ನ ಬಸವರಾಜ ಹೊರಟ್ಟಿ ಪಾಲಾಗಲಿದೆ.
ವಿಧಾನ ಪರಿಷತ್ನಲ್ಲಿ ಆಡಳಿತಾರೂಢ ಬಿಜೆಪಿ ಪ್ರಾಬಲ್ಯ ಹೊಂದಿಲ್ಲದಿರುವುದರಿಂದ ಮಸೂದೆಗಳು ಅಂಗೀಕಾರವಾಗುವಲ್ಲಿ ಜೆಡಿಎಸ್ ಜೊತೆಗಿನ ಈ ಮೈತ್ರಿ ನೆರವಿಗೆ ಬರಲಿದೆ.
ಪರಿಷತ್ ನಲ್ಲಿ 31 ಸದಸ್ಯರನ್ನು ಹೊಂದುವ ಮೂಲಕ ಬಿಜೆಪಿ ಅತಿ ದೊಡ್ಡ ಪಕ್ಷವಾಗಿದ್ದರೂ 75 ಸದಸ್ಯ ಬಲದ ಸದನದಲ್ಲಿ ಜೆಡಿಎಸ್ ನ 13 ಸದಸ್ಯರ ಬೆಂಬಲ ಈಗಲೂ ಅಗತ್ಯವಾಗಿದೆ. ಕಾಂಗ್ರೆಸ್ನ 28, ಪಕ್ಷೇತರ ಒಬ್ಬರು ಇದ್ದಾರೆ. ಒಂದು ಸ್ಥಾನ ಈ ಖಾಲಿ ಇದೆ. ಸಭಾಪತಿ ಸ್ಥಾನವನ್ನು ಬಯಸಿರುವ ಜೆಡಿಎಸ್, ಬಿಜೆಪಿಗೆ ವಿಷಯಾಧಾರಿತ ಬೆಂಬಲ ನೀಡುವುದಾಗಿ ಮಂಗಳವಾರ ನಡೆದ ಸಭೆಯಲ್ಲಿ ನಿರ್ಧರಿಸಿತ್ತು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…