ಬೆಂಗಳೂರು: ಉಪ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಬೆಂಬಲದಲ್ಲಿ ಬಿಜೆಪಿಯ ಎಂ.ಕೆ. ಪ್ರಾಣೇಶ್ ನಾಮ ಪತ್ರ ಸಲ್ಲಿಸಿದರು.. ಆ ಮೂಲಕ, ಬಿಜೆಪಿ– ಜೆಡಿಎಸ್ ನಡುವೆ ಮತ್ತೊಂದು ಸುತ್ತಿನ ‘ಮೈತ್ರಿ’ ಆರಂಭಗೊಂಡಿದೆ.
ಬಿಜೆಪಿ ಸದಸ್ಯ ಎಂ.ಕೆ ಪ್ರಾಣೇಶ್ ನಾಮಪತ್ರ ಸಲ್ಲಿಕೆ ವೇಳೆ ಜೆಡಿಎಸ್ನ ಬಸವರಾಜ ಹೊರಟ್ಟಿ, ಕೋನರೆಡ್ಡಿ ಉಪಸ್ಥಿತತರಿದ್ದರು.
ಉಪಸಭಾಪತಿ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಸಿ.ಕೊಂಡಯ್ಯ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಪರಿಷತ್ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ ,ಮುಖ್ಯ ಸಚೇತಕ ನಾರಾಯಣ್ ಸ್ವಾಮಿ, ಬಿಕೆ ಹರೀಪ್ರಸಾದ್ ಉಪಸ್ಥಿತರಿದ್ದರು.
ಜೆಡಿಎಸ್ ಮುಖಂಡ ಎಸ್.ಎಲ್. ಧರ್ಮೇಗೌಡರ ನಿಧನದಿಂದ ಉಪ ಸಭಾಪತಿ ಸ್ಥಾನ ತೆರವಾಗಿತ್ತು. ಸಭಾಪತಿ ಸ್ಥಾನ ಜೆಡಿಎಸ್ನ ಬಸವರಾಜ ಹೊರಟ್ಟಿ ಪಾಲಾಗಲಿದೆ.
ವಿಧಾನ ಪರಿಷತ್ನಲ್ಲಿ ಆಡಳಿತಾರೂಢ ಬಿಜೆಪಿ ಪ್ರಾಬಲ್ಯ ಹೊಂದಿಲ್ಲದಿರುವುದರಿಂದ ಮಸೂದೆಗಳು ಅಂಗೀಕಾರವಾಗುವಲ್ಲಿ ಜೆಡಿಎಸ್ ಜೊತೆಗಿನ ಈ ಮೈತ್ರಿ ನೆರವಿಗೆ ಬರಲಿದೆ.
ಪರಿಷತ್ ನಲ್ಲಿ 31 ಸದಸ್ಯರನ್ನು ಹೊಂದುವ ಮೂಲಕ ಬಿಜೆಪಿ ಅತಿ ದೊಡ್ಡ ಪಕ್ಷವಾಗಿದ್ದರೂ 75 ಸದಸ್ಯ ಬಲದ ಸದನದಲ್ಲಿ ಜೆಡಿಎಸ್ ನ 13 ಸದಸ್ಯರ ಬೆಂಬಲ ಈಗಲೂ ಅಗತ್ಯವಾಗಿದೆ. ಕಾಂಗ್ರೆಸ್ನ 28, ಪಕ್ಷೇತರ ಒಬ್ಬರು ಇದ್ದಾರೆ. ಒಂದು ಸ್ಥಾನ ಈ ಖಾಲಿ ಇದೆ. ಸಭಾಪತಿ ಸ್ಥಾನವನ್ನು ಬಯಸಿರುವ ಜೆಡಿಎಸ್, ಬಿಜೆಪಿಗೆ ವಿಷಯಾಧಾರಿತ ಬೆಂಬಲ ನೀಡುವುದಾಗಿ ಮಂಗಳವಾರ ನಡೆದ ಸಭೆಯಲ್ಲಿ ನಿರ್ಧರಿಸಿತ್ತು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…