ಬೆಂಗಳೂರು: ಸಕ್ಕರೆ ಉದ್ಯಮಕ್ಕೆ ಸಚಿವ ಉಮೇಶ್ ಕತ್ತಿ ಯವರು ನೀಡಿದ ಕೊಡುಗೆ ಮರೆಯುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಜ್ಯ ವಿಧಾನ ಸಭೆ ಯ ಹಿರಿಯ ನಾಯಕರಾಗಿದ್ದ ಉಮೇಶ್ ಕತ್ತಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. 25ನೇ ವಯಸ್ಸಿಗೆ ವಿಧಾನಸಭೆ ಪ್ರವೇಶಿಸಿದ್ದ ಅವರು ಉತ್ತರ ಕರ್ನಾಟಕದ ಗಟ್ಟಿ ಧ್ವನಿಯಾಗಿದ್ದರು. ಇದ್ದುದ್ದನ್ನು ಇದ್ದಂತೆ ಹೇಳುವ ನೇರ ನಡೆ-ನುಡಿಯ ವ್ಯಕ್ತಿತ್ವ ಹೊಂದಿದ್ದ ಉಮೇಶ್ ಕತ್ತಿ ಅವರು ಜನರ ಸಮಸ್ಯೆ, ಭಾವನೆಗಳಿಗೆ ಧ್ವನಿ ಆಗುವಾಗ ಆಡಳಿತ ಪಕ್ಷ, ವಿರೋಧ ಪಕ್ಷ ಎಂದು ಭೇದ ಮಾಡುತ್ತಿರಲಿಲ್ಲ ಎಂದರು.
ಅದೇ ಕಾಲಕ್ಕೆ ಎಂಥದೇ ಗಂಭೀರ ಪರಿಸ್ಥಿತಿಯನ್ನು ನವಿರು ಹಾಸ್ಯದ ಮೂಲಕ ತಿಳಿಗೊಳಿಸುವ ಸ್ವಭಾವ ಅವರದಾಗಿತ್ತು. ಸಹಕಾರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದ ಕತ್ತಿ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಲವು ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದರು. ಸಕ್ಕರೆ ಉದ್ಯಮಕ್ಕೆ ಅವರ ಕೊಡುಗೆ ಮರೆಯುವಂತಿಲ್ಲ ಎಂದು ಡಿಕೆಶಿ ಹೇಳಿದರು.
ಕತ್ತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಮಣಿಪಾಲ್ ಆಸ್ಪತ್ರೆ ಸಮೂಹದ ಮೇಲೆ ಐಟಿ ದಾಳಿ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…