ಉಮೇಶ್ ಕತ್ತಿ ನಿಧನ : ಉತ್ತರ ಕರ್ನಾಟಕದ ಧ್ವನಿ ನಿಂತು ಹೋಗಿದೆ – ಆಪ್ತನ ನೆನೆದು ಕಣ್ಣೀರಿಟ್ಟ ಬೊಮ್ಮಾಯಿ – VIshwanews24
ಉಮೇಶ್ ಕತ್ತಿ ನಿಧನ : ಉತ್ತರ ಕರ್ನಾಟಕದ ಧ್ವನಿ ನಿಂತು ಹೋಗಿದೆ – ಆಪ್ತನ ನೆನೆದು ಕಣ್ಣೀರಿಟ್ಟ ಬೊಮ್ಮಾಯಿ – VIshwanews24
ಬೆಂಗಳೂರು: ಸಚಿವ ಉಮೇಶ್ ಕತ್ತಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾವುಕರಾಗಿದ್ದಾರೆ.
ಮಳೆ ಹಾನಿ ವೀಕ್ಷಣೆ ಮೊಟಕುಗೊಳಿಸಿ ಸಿಎಂ ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಉಮೇಶ್ ಕತ್ತಿ ತಲೆ ಸವರಿ ಭಾವುಕರಾದರು. ಅಲ್ಲದೆ ಕತ್ತಿ ಜೊತೆಗಿನ ಒಡನಾಟ ನೆನೆದು ಸಿಎಂ ಕಣ್ಣೀರು ಹಾಕಿದ್ದಾರೆ.

ಬಳಿಕ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ಹಿರಿಯ ಧುರೀಣನನ್ನು ಕಳೆದುಕೊಂಡಿದೆ. ಉತ್ತರ ಕರ್ನಾಟಕದ ಧ್ವನಿ ನಿಂತು ಹೋಗಿದೆ. ವೈಯಕ್ತಿಕವಾಗಿ ನನಗೆ ತುಂಬಲಾರದ ನಷ್ಟವಾಗಿದೆ. ಆತ್ಮೀಯ ಸಹೋದರನ್ನು ಕಳೆದುಕೊಂಡಿದ್ದೇನೆ ಎಂದು ಸಿಎಂ ಬೇಸರ ವ್ಯಕ್ತಪಡಿಸಿದರು.
ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ pic.twitter.com/tcfNlw9Cdr
— Basavaraj S Bommai (@BSBommai) September 6, 2022
