ಉಳ್ಳಾಲ: ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ) ದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿನನ್ನು ಕನ್ಯಾನ ನಿವಾಸಿ ಬಾಸ್ಕರ್ ಬೆಳ್ಚಪಾಡ ಯಾನೆ ಶಶಿ ತೇವರ್ ( 69) ಎಂದು ಗುರುತಿಸಲಾಗಿದೆ. ಈತನನ್ನು ಫೆ. 24ರಂದು ಬೆಂಗಳೂರಿನ ರೈಲ್ವೇ ಸ್ಟೇಷನ್ ಬಳಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಶಶಿ ತೇವರ್ ತನಿಖೆ ವೇಳೆ ನೀಡಿದ ಮಾಹಿತಿ ಮೇರೆಗೆ ಕೆಸಿರೋಡ್ ನಿವಾಸಿ ನಝೀರ್ ಎಂಬಾತನನ್ನು ಪೊಲೀಸರು ಫೆ.25 ರಂದು ಬಂಧಿಸಿದ್ದಾರೆ.
ಬಂಧಿತ ಆರೋಪಿ ಶಶಿ ತೇವರ್ ನಝೀರ್ ಜೊತೆ ಸಂಪರ್ಕದಲ್ಲಿ ಇದ್ದ. ಈತ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ದರೋಡೆ ಕೃತ್ಯವೆಸಗಲು ಸುಮಾರು 6 ತಿಂಗಳಿನಿಂದ ಇತರ ಆರೋಪಿಗಳೊಂದಿಗೆ ಸೇರಿ ಸಂಚು ರೂಪಿಸಿ ಕೃತ್ಯವೆಸಗಿದ್ದಾನೆ ಎಂದು ತನಿಖೆ ವೇಳೆ ತಿಳಿದು ಬಂದಿದೆ.
ನಝೀರ್ ಎಂಬಾತ ಭಾಸ್ಕರ್ ಬೆಳ್ಚಪಾಡ ಯಾನೆ ಶಶಿ ತೇವರ್ ಜೊತೆ ದರೋಡೆ ಪ್ರಕರಣದಲ್ಲಿ ಶಾಮೀಲಾಗಿದ್ದು, ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡವನ್ನು ಆರೋಪಿಗಳಿಗೆ ತೋರಿಸಿಕೊಟ್ಟು ಡಕಾಯತಿ ನಡೆಸಬೇಕಾದ ದಿನ, ವೇಳೆ ಹಾಗೂ ಸೊಸೈಟಿಯಲ್ಲಿರುವ ಸಿಬ್ಬಂದಿಗಳ ಬಗ್ಗೆ ಮತ್ತು ಕೃತ್ಯದ ನಂತರ ತಪ್ಪಿಸಿಕೊಂಡು ಹೋಗುವ ಮಾರ್ಗ ಮುಂತಾದ ಮಾಹಿತಿಯನ್ನು ನಝೀರ್ ಆರೋಪಿಗಳಿಗೆ ನೀಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಜ.17 ರಂದು ಕೋಟೆಕಾರ್ ಸಹಕಾರಿ ಬ್ಯಾಂಕ್ ನಲ್ಲಿ ದರೋಡೆ ಪ್ರಕರಣ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…