ಉಳ್ಳಾಲ: ಕಳೆದ ಸೋಮವಾರದಿಂದ ಮನೆಯಿಂದ ನಾಪತ್ತೆಯಾಗಿದ್ದ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಮ್(30) ಮೃತ ಯುವಕ.
ಫೈನಾನ್ಸ್ ಸೀಸರ್ ಆಗಿದ್ದ ಗೌತಮ್ ಕಳೆದ ಸೋಮವಾರ ಸಂಜೆ ತೊಕ್ಕೊಟ್ಟಿನಲ್ಲಿ ನಡೆದಿದ್ದ ಬಬ್ಬುಸ್ವಾಮಿ ದೈವದ ಪುನರ್ ಪ್ರತಿಷ್ಠೆ, ಕಲಶಾಭಿಷೇಕದ ಹೊರೆಕಾಣಿಕೆಯಲ್ಲಿ ಭಾಗವಹಿಸಿ ಮನೆಗೆ ತೆರಳಿದ್ದ. ರಾತ್ರಿ ವೇಳೆ ಮನೆ ಮಂದಿಯಲ್ಲಿ ಕಿರಿಕ್ ಮಾಡಿದ್ದ ಗೌತಮ್ ಮನೆ ಬಿಟ್ಟು ತೆರಳಿದ್ದನಂತೆ. ಗೌತಮ್ ಮತ್ತೆ ಮರಳದ ಹಿನ್ನಲೆಯಲ್ಲಿ ಮರುದಿನ ಮನೆ ಮಂದಿ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಇನ್ನು ನಿನ್ನೆ ಸಂಜೆ ವೇಳೆ ನೇತ್ರಾವತಿ ನದಿಯಲ್ಲಿ ಗೌತಮ್ ಶವವಾಗಿ ಪತ್ತೆಯಾಗಿದ್ದು ಪಾಂಡೇಶ್ವರ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಇಂದು ಮನೆ ಮಂದಿ ಮೃತದೇಹವನ್ನು ಗುರುತಿಸಿದ್ದು ಅವರ ಸಮಕ್ಷಮದಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಗೌತಮ್ ವಿವಾಹಿತನಾಗಿದ್ದು ವರುಷಗಳ ಹಿಂದೆಯೇ ಪತ್ನಿಯಿಂದ ವಿಚ್ಛೇದಿತನಾಗಿದ್ದ. ಕುಡಿತದ ಚಟ ಮೈಗೂಡಿಸಿದ್ದ ಗೌತಮ್ ಕ್ಷುಲ್ಲಕ ಕಾರಣಗಳಿಗೆ ಮನೆ ಮಂದಿಯಲ್ಲಿ ಕಿರಿಕ್ ಮಾಡುತ್ತಲೇ ಇದ್ದನಂತೆ.
ಮೃತ ಗೌತಮ್ ತಂದೆ, ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…