ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ತೊಕ್ಕೊಟ್ಟು ಜಂಕ್ಷನ್ ಬಳಿ ಹೊಲಿಗೆ ನೂಲು ಸೇರಿದಂತೆ ಟೈಲರ್ ಅಂಗಡಿಗಳಿಗೆ ಹೊಲಿಗೆ ಸಂಬಂಧಿಸಿದ ಕಚ್ಚಾ ವಸ್ತುಗಳನ್ನು ಪೂರೈಸುವ ಥ್ರೆಡ್ ಹೌಸ್ ಅಂಗಡಿಯನ್ಬು ಕಳೆದ ಏಳೆಂಟು ವರ್ಷಗಳಿಂದ ನಡೆಸುತ್ತಿದ್ದರು. ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಅವರು ಬೆಳಗ್ಗೆ 6.30ಕ್ಕೆ ಮನೆಯಿಂದ ಹೊರಟಿದ್ದು, ಅಂಗಡಿಯೊಳಗೆ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಅವರು ಆತ್ಮಹತ್ಯೆಗೈದ ಸ್ಥಳದಲ್ಲಿ ಚೀಟಿಯೊಂದರಲ್ಲಿನನ್ನ ಆತ್ಮಹತ್ಯೆಗೆ ನಾನೇ ಕಾರಣ ಎಂದು ಬರೆದು ಆತ್ಮಹತ್ಯೆಗೈದಿದ್ದಾರೆ.
ಮೃತರು ತಾಯಿ, ಪತ್ನಿ ಪುತ್ರನನ್ಬು ಅಗಲಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…