Featured

ಉಳ್ಳಾಲ: ಅರಬ್ಬೀ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ ಸಿರಿಯಾದ ಹಡಗು – 15 ಮಂದಿಯನ್ನು ರಕ್ಷಿಸಿದ ಕೋಸ್ಟ್‌ಗಾರ್ಡ್‌ – Vishwanews24

ಉಳ್ಳಾಲ: ಅರಬ್ಬೀ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ ಸಿರಿಯಾದ ಹಡಗು – 15 ಮಂದಿಯನ್ನು ರಕ್ಷಿಸಿದ ಕೋಸ್ಟ್‌ಗಾರ್ಡ್‌

ಉಳ್ಳಾಲ: ತಾಂತ್ರಿಕ ಸಮಸ್ಯೆಯಿಂದಾಗಿ ಸಿರಿಯಾ ಮೂಲದ ಹಡಗೊಂದು ಉಚ್ಚಿಲ ಸೋಮೇಶ್ವರ ಬಳಿ ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿದ ಘಟನೆ ಮಂಗಳವಾರ ನಡೆದಿದೆ.

ಹಡಗಿನಲ್ಲಿ ಸುಮಾರು 15 ಮಂದಿ ಸಿಬಂದಿಯಿದ್ದು, ಎಲ್ಲರನ್ನೂ ಕೋಸ್ಟ್ ಗಾರ್ಡ್ ತಂಡ ರಕ್ಷಿಸಿದ್ದಾರೆ. ಹಡಗು 8000 ಸಾವಿರ ಟನ್ ಉಕ್ಕಿನ ತಂತಿಗಳನ್ನು ಹೊತ್ತು ಓಮಾನ್ ನಿಂದ ಈಜಿಪ್ಟ್ ದೇಶಕ್ಕೆ ಸಾಗುತ್ತಿತ್ತು. ಈ ವೇಳೆ ಅರಬ್ಬೀ ಸಮುದ್ರದಲ್ಲಿ ಘಟನೆ ಸೆಂಭವಿಸಿದೆ. ಮಂಗಳೂರಿನಿಂದ 5.6 ನಾಟೆಕಲ್ ದೂರದಲ್ಲಿ ಹಡಗು ಸಂಚರಿಸುತ್ತಿದ್ದಾಗ ಅಡಿಭಾಗದಿಂದ ರಂಧ್ರ ಉಂಟಾಗಿ ನೀರು ಒಳಹೊಕ್ಕಿರುವುದರಿಂದ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಂಡಿದೆ ಎನ್ನಲಾಗಿದ್ದು, ಸಮಸ್ಯೆ ಕಾಣಿಸಿಕೊಂಡ ಕೂಡಲೇ ಕೋಸ್ಟ್‌ಗಾರ್ಡ್‌ಗೆ ಹಡಗಿನಲ್ಲಿದ್ದ ಸಿಬಂದಿ ಸಂದೇಶ ರವಾನಿಸಿದ ಕಾರಣ ರಕ್ಷಣೆ ಸಾಧ್ಯವಾಗಿದೆ.

ಹಡಗನ್ನು ದಡಕ್ಕೆ ಎಳೆದು ತರುವ ಪ್ರಯತ್ನ ನಡೆಸಲಾಗುತ್ತಿದೆ. ಆದರೆ ಮಳೆಯ ಕಾರಣ ಕಾರ್ಯಾಚರಣೆ ಸ್ವಲ್ಪ ವಿಳಂಬವಾಗುತ್ತಿದೆ ಎನ್ನಲಾಗಿದೆ.

 

ಪ್ರಿನ್ಸೆಸ್ ಮಿರಾಲ್ ಎಂಬುದು ಹಡಗಿನ ಹೆಸರಾಗಿದ್ದು ಹಡಗಿನ ಮಾಸ್ಟರ್ ಸಫ್ವಾನ್ ಕೈದೂನ್ ಅಬ್ದುಲ್ ಖಾದರ್, ಅಝಮ್ ಅಲ್ಮಾ ಸೊಹೇಲ್, ತುಮೇಹ್ ಮೊಹಮ್ಮದ್, ಅಲಿ ಬದ್ರ್ ಮೊಹಮ್ಮದ್, ಲಿವಾ ಮೈನಿ ಅಹ್ಮದ್, ಅಬ್ದುಲ್ಲ ಸಮೋತ್ ಉಸ್ಮಾನ್, ಅಲಿ ಝ್ವೆಝ್ಕೆ ಖಾಲೆದ್, ನಿಝಾರ್ ಅಬ್ದುಲ್ಲಾ, ಹಾರೂನ್ ಗಾಲಿಬ್, ಅಬ್ಬಾಸ್ ರಮಿ, ಅಬ್ದುಲ್ ಕರೀಮ್ ನಾಸಿರ್, ಮೊಹಮ್ಮದ್ ಜೌದ್ ಆದಿಲ್, ಅಬ್ರಾಹೀಂ ಮೊಹಮ್ಮದ್, ಅಬ್ದುಲ್ಲಾ ನಾದಿರ್, ಮುಸ್ತಫಾ ಝಕರಿಯಾ ಎಂಬ 15 ಮಂದಿ ಸಿರಿಯನ್ ಸಿಬ್ಬಂದಿಗಳನ್ನು ರಕ್ಷಿಸಲಾಗಿದೆ ತಿಳಿದುಬಂದಿದೆ.

Vishwa News 24

Recent Posts

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…

10 hours ago

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

13 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

15 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

15 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

16 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

16 hours ago