Featured

ಉಳ್ಳಾಲ: ಅರಬ್ಬೀ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ ಸಿರಿಯಾದ ಹಡಗು – 15 ಮಂದಿಯನ್ನು ರಕ್ಷಿಸಿದ ಕೋಸ್ಟ್‌ಗಾರ್ಡ್‌ – Vishwanews24

ಉಳ್ಳಾಲ: ಅರಬ್ಬೀ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ ಸಿರಿಯಾದ ಹಡಗು – 15 ಮಂದಿಯನ್ನು ರಕ್ಷಿಸಿದ ಕೋಸ್ಟ್‌ಗಾರ್ಡ್‌

ಉಳ್ಳಾಲ: ತಾಂತ್ರಿಕ ಸಮಸ್ಯೆಯಿಂದಾಗಿ ಸಿರಿಯಾ ಮೂಲದ ಹಡಗೊಂದು ಉಚ್ಚಿಲ ಸೋಮೇಶ್ವರ ಬಳಿ ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿದ ಘಟನೆ ಮಂಗಳವಾರ ನಡೆದಿದೆ.

ಹಡಗಿನಲ್ಲಿ ಸುಮಾರು 15 ಮಂದಿ ಸಿಬಂದಿಯಿದ್ದು, ಎಲ್ಲರನ್ನೂ ಕೋಸ್ಟ್ ಗಾರ್ಡ್ ತಂಡ ರಕ್ಷಿಸಿದ್ದಾರೆ. ಹಡಗು 8000 ಸಾವಿರ ಟನ್ ಉಕ್ಕಿನ ತಂತಿಗಳನ್ನು ಹೊತ್ತು ಓಮಾನ್ ನಿಂದ ಈಜಿಪ್ಟ್ ದೇಶಕ್ಕೆ ಸಾಗುತ್ತಿತ್ತು. ಈ ವೇಳೆ ಅರಬ್ಬೀ ಸಮುದ್ರದಲ್ಲಿ ಘಟನೆ ಸೆಂಭವಿಸಿದೆ. ಮಂಗಳೂರಿನಿಂದ 5.6 ನಾಟೆಕಲ್ ದೂರದಲ್ಲಿ ಹಡಗು ಸಂಚರಿಸುತ್ತಿದ್ದಾಗ ಅಡಿಭಾಗದಿಂದ ರಂಧ್ರ ಉಂಟಾಗಿ ನೀರು ಒಳಹೊಕ್ಕಿರುವುದರಿಂದ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಂಡಿದೆ ಎನ್ನಲಾಗಿದ್ದು, ಸಮಸ್ಯೆ ಕಾಣಿಸಿಕೊಂಡ ಕೂಡಲೇ ಕೋಸ್ಟ್‌ಗಾರ್ಡ್‌ಗೆ ಹಡಗಿನಲ್ಲಿದ್ದ ಸಿಬಂದಿ ಸಂದೇಶ ರವಾನಿಸಿದ ಕಾರಣ ರಕ್ಷಣೆ ಸಾಧ್ಯವಾಗಿದೆ.

ಹಡಗನ್ನು ದಡಕ್ಕೆ ಎಳೆದು ತರುವ ಪ್ರಯತ್ನ ನಡೆಸಲಾಗುತ್ತಿದೆ. ಆದರೆ ಮಳೆಯ ಕಾರಣ ಕಾರ್ಯಾಚರಣೆ ಸ್ವಲ್ಪ ವಿಳಂಬವಾಗುತ್ತಿದೆ ಎನ್ನಲಾಗಿದೆ.

 

ಪ್ರಿನ್ಸೆಸ್ ಮಿರಾಲ್ ಎಂಬುದು ಹಡಗಿನ ಹೆಸರಾಗಿದ್ದು ಹಡಗಿನ ಮಾಸ್ಟರ್ ಸಫ್ವಾನ್ ಕೈದೂನ್ ಅಬ್ದುಲ್ ಖಾದರ್, ಅಝಮ್ ಅಲ್ಮಾ ಸೊಹೇಲ್, ತುಮೇಹ್ ಮೊಹಮ್ಮದ್, ಅಲಿ ಬದ್ರ್ ಮೊಹಮ್ಮದ್, ಲಿವಾ ಮೈನಿ ಅಹ್ಮದ್, ಅಬ್ದುಲ್ಲ ಸಮೋತ್ ಉಸ್ಮಾನ್, ಅಲಿ ಝ್ವೆಝ್ಕೆ ಖಾಲೆದ್, ನಿಝಾರ್ ಅಬ್ದುಲ್ಲಾ, ಹಾರೂನ್ ಗಾಲಿಬ್, ಅಬ್ಬಾಸ್ ರಮಿ, ಅಬ್ದುಲ್ ಕರೀಮ್ ನಾಸಿರ್, ಮೊಹಮ್ಮದ್ ಜೌದ್ ಆದಿಲ್, ಅಬ್ರಾಹೀಂ ಮೊಹಮ್ಮದ್, ಅಬ್ದುಲ್ಲಾ ನಾದಿರ್, ಮುಸ್ತಫಾ ಝಕರಿಯಾ ಎಂಬ 15 ಮಂದಿ ಸಿರಿಯನ್ ಸಿಬ್ಬಂದಿಗಳನ್ನು ರಕ್ಷಿಸಲಾಗಿದೆ ತಿಳಿದುಬಂದಿದೆ.

Vishwa News 24

Recent Posts

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

2 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

3 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

4 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

4 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

5 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

5 hours ago