ಉಳ್ಳಾಲ: ಕಡಲ್ಕೊರೆತಕ್ಕೆ ಮನೆಯೊಂದು ಸಮುದ್ರ ಪಾಲಾದ ಘಟನೆ ಉಚ್ಚಿಲ ಬಟ್ಟಪಾಡಿಯಲ್ಲಿ ಗುರುವಾರ ನಡೆದಿದ್ದು, ಇನ್ನು 3 ಮನೆ ಅಪಾಯದಲ್ಲಿರುವ ಘಟನೆ ವರದಿಯಾಗಿದೆ.
ಅಪಾಯದಂಚಿನಲ್ಲಿದ್ದ ಈ ಮನೆಯಲ್ಲಿ ನೆಲೆಸಿದ್ದ ಬೀಫಾತುಮ್ಮಾ ಅವರ ಕುಟುಂಬವನ್ನು ಜೂನ್ 26ರಂದೇ ಸ್ಥಳಾಂತರಿಸಲಾಗಿತ್ತು. ಹೀಗಾಗಿ ಸಂಭವನೀಯ ಅಪಾಯ ತಪ್ಪಿದಂತಾಗಿದೆ. ಇನ್ನು ಈ ಪ್ರದೇಶದಲ್ಲಿ ಅಪಾಯದಂಚಿನಲ್ಲಿದ್ದ 3 ಮನೆಗಳ ಸದಸ್ಯರನ್ನು ಜೂನ್ 27ರಂದು ಅಧಿಕಾರಿಗಳು ಸ್ಥಳಾಂತರಿಸಿದ್ದರು.
ಈ ಪ್ರದೇಶದಲ್ಲಿ ಸಮುದ್ರದ ಅಲೆಗಳ ಅಬ್ಬರ ತೀವ್ರಗೊಂಡಿದ್ದು, ಈಗಾಗಲೇ ಕೊಚ್ಚಿಹೋಗಿರುವ ಬೀಫಾತುಮ್ಮಾ ಅವರ ಮನೆಯ ಹಿಂಬದಿಯಲ್ಲೇ ಇರುವ ಮೂರು ಮನೆಗಳು ಅಪಾಯಕ್ಕೆ ಸಿಲುಕಿವೆ. ಈ ಮನೆಗಳಿಗೂ ಕಡಲ ಅಲೆಗಳು ರಭಸವಾಗಿ ಅಪ್ಪಳಿಸುತ್ತಿದ್ದು, ಇವುಗಳು ಕೂಡ ಸಮುದ್ರಪಾಲಾಗುವ ಹಿನ್ನಲೆಯಲ್ಲಿ ಈ ಮನೆಯ ಸದಸ್ಯರನ್ನು ಸ್ಥಳಾಂತರಿಸಲಾಗಿತ್ತು.
ಸ್ಥಳಾಂತರಗೊಂಡ ನಾಲ್ಕು ಮನೆಯ ಸದಸ್ಯರುಗಳು ಸದ್ಯ ಸಂಬಂಧಿಕರ ಮನೆಗಳಲ್ಲಿ ನೆಲೆಸಿದ್ದಾರೆ. ಶೀಘ್ರವೇ ಅವರುಗಳಿಗೆ ಪರ್ಯಾಯ ಬಾಡಿಗೆ ಮನೆಗಳ ವ್ಯವಸ್ಥೆ ಮಾಡಲಾಗುವುದು ಎಂದು ಸೋಮೇಶ್ವರ ಪುರಸಭಾ ಮುಖ್ಯಾಧಿಕಾರಿ ಮತ್ತಡಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…