ಉಳ್ಳಾಲ: ಕಡಲ್ಕೊರೆತಕ್ಕೆ ಮನೆಯೊಂದು ಸಮುದ್ರ ಪಾಲಾದ ಘಟನೆ ಉಚ್ಚಿಲ ಬಟ್ಟಪಾಡಿಯಲ್ಲಿ ಗುರುವಾರ ನಡೆದಿದ್ದು, ಇನ್ನು 3 ಮನೆ ಅಪಾಯದಲ್ಲಿರುವ ಘಟನೆ ವರದಿಯಾಗಿದೆ.
ಅಪಾಯದಂಚಿನಲ್ಲಿದ್ದ ಈ ಮನೆಯಲ್ಲಿ ನೆಲೆಸಿದ್ದ ಬೀಫಾತುಮ್ಮಾ ಅವರ ಕುಟುಂಬವನ್ನು ಜೂನ್ 26ರಂದೇ ಸ್ಥಳಾಂತರಿಸಲಾಗಿತ್ತು. ಹೀಗಾಗಿ ಸಂಭವನೀಯ ಅಪಾಯ ತಪ್ಪಿದಂತಾಗಿದೆ. ಇನ್ನು ಈ ಪ್ರದೇಶದಲ್ಲಿ ಅಪಾಯದಂಚಿನಲ್ಲಿದ್ದ 3 ಮನೆಗಳ ಸದಸ್ಯರನ್ನು ಜೂನ್ 27ರಂದು ಅಧಿಕಾರಿಗಳು ಸ್ಥಳಾಂತರಿಸಿದ್ದರು.
ಈ ಪ್ರದೇಶದಲ್ಲಿ ಸಮುದ್ರದ ಅಲೆಗಳ ಅಬ್ಬರ ತೀವ್ರಗೊಂಡಿದ್ದು, ಈಗಾಗಲೇ ಕೊಚ್ಚಿಹೋಗಿರುವ ಬೀಫಾತುಮ್ಮಾ ಅವರ ಮನೆಯ ಹಿಂಬದಿಯಲ್ಲೇ ಇರುವ ಮೂರು ಮನೆಗಳು ಅಪಾಯಕ್ಕೆ ಸಿಲುಕಿವೆ. ಈ ಮನೆಗಳಿಗೂ ಕಡಲ ಅಲೆಗಳು ರಭಸವಾಗಿ ಅಪ್ಪಳಿಸುತ್ತಿದ್ದು, ಇವುಗಳು ಕೂಡ ಸಮುದ್ರಪಾಲಾಗುವ ಹಿನ್ನಲೆಯಲ್ಲಿ ಈ ಮನೆಯ ಸದಸ್ಯರನ್ನು ಸ್ಥಳಾಂತರಿಸಲಾಗಿತ್ತು.
ಸ್ಥಳಾಂತರಗೊಂಡ ನಾಲ್ಕು ಮನೆಯ ಸದಸ್ಯರುಗಳು ಸದ್ಯ ಸಂಬಂಧಿಕರ ಮನೆಗಳಲ್ಲಿ ನೆಲೆಸಿದ್ದಾರೆ. ಶೀಘ್ರವೇ ಅವರುಗಳಿಗೆ ಪರ್ಯಾಯ ಬಾಡಿಗೆ ಮನೆಗಳ ವ್ಯವಸ್ಥೆ ಮಾಡಲಾಗುವುದು ಎಂದು ಸೋಮೇಶ್ವರ ಪುರಸಭಾ ಮುಖ್ಯಾಧಿಕಾರಿ ಮತ್ತಡಿ ಮಾಹಿತಿ ನೀಡಿದ್ದಾರೆ.
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…