Featured

ಉಳ್ಳಾಲ: ಅಲೆಗಳ ಅಬ್ಬರಕ್ಕೆ ಮನೆ ಸಮುದ್ರಪಾಲು ; ಅಪಾಯದಲ್ಲಿರುವ ಮತ್ತೆ 3 ಮನೆಗಳು – vishwanews24

ಉಳ್ಳಾಲ: ಅಲೆಗಳ ಅಬ್ಬರಕ್ಕೆ ಮನೆ ಸಮುದ್ರಪಾಲು ; ಅಪಾಯದಲ್ಲಿರುವ ಮತ್ತೆ 3 ಮನೆಗಳು

ಉಳ್ಳಾಲ: ಕಡಲ್ಕೊರೆತಕ್ಕೆ ಮನೆಯೊಂದು ಸಮುದ್ರ ಪಾಲಾದ ಘಟನೆ ಉಚ್ಚಿಲ ಬಟ್ಟಪಾಡಿಯಲ್ಲಿ ಗುರುವಾರ ನಡೆದಿದ್ದು, ಇನ್ನು 3 ಮನೆ ಅಪಾಯದಲ್ಲಿರುವ ಘಟನೆ ವರದಿಯಾಗಿದೆ.

ಅಪಾಯದಂಚಿನಲ್ಲಿದ್ದ ಈ ಮನೆಯಲ್ಲಿ ನೆಲೆಸಿದ್ದ ಬೀಫಾತುಮ್ಮಾ ಅವರ ಕುಟುಂಬವನ್ನು ಜೂನ್ 26ರಂದೇ ಸ್ಥಳಾಂತರಿಸಲಾಗಿತ್ತು. ಹೀಗಾಗಿ ಸಂಭವನೀಯ ಅಪಾಯ ತಪ್ಪಿದಂತಾಗಿದೆ. ಇನ್ನು ಈ ಪ್ರದೇಶದಲ್ಲಿ ಅಪಾಯದಂಚಿನಲ್ಲಿದ್ದ 3 ಮನೆಗಳ ಸದಸ್ಯರನ್ನು ಜೂನ್ 27ರಂದು ಅಧಿಕಾರಿಗಳು ಸ್ಥಳಾಂತರಿಸಿದ್ದರು.

ಈ ಪ್ರದೇಶದಲ್ಲಿ ಸಮುದ್ರದ ಅಲೆಗಳ ಅಬ್ಬರ ತೀವ್ರಗೊಂಡಿದ್ದು, ಈಗಾಗಲೇ ಕೊಚ್ಚಿಹೋಗಿರುವ ಬೀಫಾತುಮ್ಮಾ ಅವರ ಮನೆಯ ಹಿಂಬದಿಯಲ್ಲೇ ಇರುವ ಮೂರು ಮನೆಗಳು ಅಪಾಯಕ್ಕೆ ಸಿಲುಕಿವೆ. ಈ ಮನೆಗಳಿಗೂ ಕಡಲ ಅಲೆಗಳು ರಭಸವಾಗಿ ಅಪ್ಪಳಿಸುತ್ತಿದ್ದು, ಇವುಗಳು ಕೂಡ ಸಮುದ್ರಪಾಲಾಗುವ ಹಿನ್ನಲೆಯಲ್ಲಿ ಈ ಮನೆಯ ಸದಸ್ಯರನ್ನು ಸ್ಥಳಾಂತರಿಸಲಾಗಿತ್ತು.

ಸ್ಥಳಾಂತರಗೊಂಡ ನಾಲ್ಕು ಮನೆಯ ಸದಸ್ಯರುಗಳು ಸದ್ಯ ಸಂಬಂಧಿಕರ ಮನೆಗಳಲ್ಲಿ ನೆಲೆಸಿದ್ದಾರೆ. ಶೀಘ್ರವೇ ಅವರುಗಳಿಗೆ ಪರ್ಯಾಯ ಬಾಡಿಗೆ ಮನೆಗಳ ವ್ಯವಸ್ಥೆ ಮಾಡಲಾಗುವುದು ಎಂದು ಸೋಮೇಶ್ವರ ಪುರಸಭಾ ಮುಖ್ಯಾಧಿಕಾರಿ ಮತ್ತಡಿ ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

1 hour ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

1 hour ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

1 hour ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

2 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

2 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago