ಉಳ್ಳಾಲ: ಕಡಲ್ಕೊರೆತಕ್ಕೆ ಮನೆಯೊಂದು ಸಮುದ್ರ ಪಾಲಾದ ಘಟನೆ ಉಚ್ಚಿಲ ಬಟ್ಟಪಾಡಿಯಲ್ಲಿ ಗುರುವಾರ ನಡೆದಿದ್ದು, ಇನ್ನು 3 ಮನೆ ಅಪಾಯದಲ್ಲಿರುವ ಘಟನೆ ವರದಿಯಾಗಿದೆ.
ಅಪಾಯದಂಚಿನಲ್ಲಿದ್ದ ಈ ಮನೆಯಲ್ಲಿ ನೆಲೆಸಿದ್ದ ಬೀಫಾತುಮ್ಮಾ ಅವರ ಕುಟುಂಬವನ್ನು ಜೂನ್ 26ರಂದೇ ಸ್ಥಳಾಂತರಿಸಲಾಗಿತ್ತು. ಹೀಗಾಗಿ ಸಂಭವನೀಯ ಅಪಾಯ ತಪ್ಪಿದಂತಾಗಿದೆ. ಇನ್ನು ಈ ಪ್ರದೇಶದಲ್ಲಿ ಅಪಾಯದಂಚಿನಲ್ಲಿದ್ದ 3 ಮನೆಗಳ ಸದಸ್ಯರನ್ನು ಜೂನ್ 27ರಂದು ಅಧಿಕಾರಿಗಳು ಸ್ಥಳಾಂತರಿಸಿದ್ದರು.
ಈ ಪ್ರದೇಶದಲ್ಲಿ ಸಮುದ್ರದ ಅಲೆಗಳ ಅಬ್ಬರ ತೀವ್ರಗೊಂಡಿದ್ದು, ಈಗಾಗಲೇ ಕೊಚ್ಚಿಹೋಗಿರುವ ಬೀಫಾತುಮ್ಮಾ ಅವರ ಮನೆಯ ಹಿಂಬದಿಯಲ್ಲೇ ಇರುವ ಮೂರು ಮನೆಗಳು ಅಪಾಯಕ್ಕೆ ಸಿಲುಕಿವೆ. ಈ ಮನೆಗಳಿಗೂ ಕಡಲ ಅಲೆಗಳು ರಭಸವಾಗಿ ಅಪ್ಪಳಿಸುತ್ತಿದ್ದು, ಇವುಗಳು ಕೂಡ ಸಮುದ್ರಪಾಲಾಗುವ ಹಿನ್ನಲೆಯಲ್ಲಿ ಈ ಮನೆಯ ಸದಸ್ಯರನ್ನು ಸ್ಥಳಾಂತರಿಸಲಾಗಿತ್ತು.
ಸ್ಥಳಾಂತರಗೊಂಡ ನಾಲ್ಕು ಮನೆಯ ಸದಸ್ಯರುಗಳು ಸದ್ಯ ಸಂಬಂಧಿಕರ ಮನೆಗಳಲ್ಲಿ ನೆಲೆಸಿದ್ದಾರೆ. ಶೀಘ್ರವೇ ಅವರುಗಳಿಗೆ ಪರ್ಯಾಯ ಬಾಡಿಗೆ ಮನೆಗಳ ವ್ಯವಸ್ಥೆ ಮಾಡಲಾಗುವುದು ಎಂದು ಸೋಮೇಶ್ವರ ಪುರಸಭಾ ಮುಖ್ಯಾಧಿಕಾರಿ ಮತ್ತಡಿ ಮಾಹಿತಿ ನೀಡಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…