ಉಳ್ಳಾಲ: ಕಡಲ್ಕೊರೆತಕ್ಕೆ ಮನೆಯೊಂದು ಸಮುದ್ರ ಪಾಲಾದ ಘಟನೆ ಉಚ್ಚಿಲ ಬಟ್ಟಪಾಡಿಯಲ್ಲಿ ಗುರುವಾರ ನಡೆದಿದ್ದು, ಇನ್ನು 3 ಮನೆ ಅಪಾಯದಲ್ಲಿರುವ ಘಟನೆ ವರದಿಯಾಗಿದೆ.
ಅಪಾಯದಂಚಿನಲ್ಲಿದ್ದ ಈ ಮನೆಯಲ್ಲಿ ನೆಲೆಸಿದ್ದ ಬೀಫಾತುಮ್ಮಾ ಅವರ ಕುಟುಂಬವನ್ನು ಜೂನ್ 26ರಂದೇ ಸ್ಥಳಾಂತರಿಸಲಾಗಿತ್ತು. ಹೀಗಾಗಿ ಸಂಭವನೀಯ ಅಪಾಯ ತಪ್ಪಿದಂತಾಗಿದೆ. ಇನ್ನು ಈ ಪ್ರದೇಶದಲ್ಲಿ ಅಪಾಯದಂಚಿನಲ್ಲಿದ್ದ 3 ಮನೆಗಳ ಸದಸ್ಯರನ್ನು ಜೂನ್ 27ರಂದು ಅಧಿಕಾರಿಗಳು ಸ್ಥಳಾಂತರಿಸಿದ್ದರು.
ಈ ಪ್ರದೇಶದಲ್ಲಿ ಸಮುದ್ರದ ಅಲೆಗಳ ಅಬ್ಬರ ತೀವ್ರಗೊಂಡಿದ್ದು, ಈಗಾಗಲೇ ಕೊಚ್ಚಿಹೋಗಿರುವ ಬೀಫಾತುಮ್ಮಾ ಅವರ ಮನೆಯ ಹಿಂಬದಿಯಲ್ಲೇ ಇರುವ ಮೂರು ಮನೆಗಳು ಅಪಾಯಕ್ಕೆ ಸಿಲುಕಿವೆ. ಈ ಮನೆಗಳಿಗೂ ಕಡಲ ಅಲೆಗಳು ರಭಸವಾಗಿ ಅಪ್ಪಳಿಸುತ್ತಿದ್ದು, ಇವುಗಳು ಕೂಡ ಸಮುದ್ರಪಾಲಾಗುವ ಹಿನ್ನಲೆಯಲ್ಲಿ ಈ ಮನೆಯ ಸದಸ್ಯರನ್ನು ಸ್ಥಳಾಂತರಿಸಲಾಗಿತ್ತು.
ಸ್ಥಳಾಂತರಗೊಂಡ ನಾಲ್ಕು ಮನೆಯ ಸದಸ್ಯರುಗಳು ಸದ್ಯ ಸಂಬಂಧಿಕರ ಮನೆಗಳಲ್ಲಿ ನೆಲೆಸಿದ್ದಾರೆ. ಶೀಘ್ರವೇ ಅವರುಗಳಿಗೆ ಪರ್ಯಾಯ ಬಾಡಿಗೆ ಮನೆಗಳ ವ್ಯವಸ್ಥೆ ಮಾಡಲಾಗುವುದು ಎಂದು ಸೋಮೇಶ್ವರ ಪುರಸಭಾ ಮುಖ್ಯಾಧಿಕಾರಿ ಮತ್ತಡಿ ಮಾಹಿತಿ ನೀಡಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…