ಉಳ್ಳಾಲ : ಅವಿವಾಹಿತರೊಬ್ಬರು ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.
ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ನಿವಾಸಿ ನಾಗರಾಜ್ ಶೆಟ್ಟಿ (32) ಆತ್ಮಹತ್ಯೆ ನಡೆಸಿಕೊಂಡವರು.
ಕೋಟೆಕಾರು ಬೀರಿಯಲ್ಲಿರುವ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದ ನಾಗರಾಜ್ ನಿನ್ನೆ ಕೆಲಸಕ್ಕೆ ತೆರಳಿ ರಾತ್ರಿ ಕೋಣೆಯಲ್ಲಿ ಮಲಗಿದವರು ಕೃತ್ಯ ಎಸಗಿದ್ದಾರೆ. ಇವರ ಸಹೋದರಿಯ ಪ್ರಸವ ಹಿನ್ನೆಲೆಯಲ್ಲಿ ತಾಯಿ ಆಕೆಯ ಮಂಗಳೂರಿನ ಮನೆಯಲ್ಲಿದ್ದು, ಕಿರಿಯ ಸಹೋದರ ಹಾಗೂ ದೊಡ್ಡಮ್ಮ ಮನೆಯಲ್ಲಿದ್ದರು.
ಇನ್ನು ಬೆಳಿಗ್ಗೆ ಕೋಣೆ ಬಾಗಿಲು ತೆರೆಯದೇ ಇರುವುದನ್ನು ಗಮನಿಸಿ ಮನೆಮಂದಿ ಒಡೆದು ಗಮನಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
ಚೆಂಬುಗುಡ್ಡೆ ಸೇವಂತಿಗುಡ್ಡೆಯಲ್ಲಿ ನೆಲೆಸಿದ್ದ ಕುಟುಂಬ ಐದು ವರ್ಷಗಳ ಹಿಂದಷ್ಟೇ ಮಾಡೂರು ಸಮೀಪ ಮನೆಯನ್ನು ಖರೀದಿಸಿ ನೆಲೆಸಿದ್ದರು. ಕಿರಿಯ ಸಹೋದರನಿಗೂ ವಿವಾಹ ನಿಶ್ಚಯವಾಗಿದ್ದು, ನಾಗರಾಜ್ ಮಾತ್ರ ವಿವಾಹವಾಗುವುದಿಲ್ಲ ಎಂದು ಉಳಿದಿದ್ದರು. ಆರ್ಥಿಕ ಅಡಚಣೆ ಕೃತ್ಯಕ್ಕೆ ಕಾರಣವಾಗಿರಬಹುದು ಅನ್ನುವ ಸಂಶಯ ವ್ಯಕ್ತಪಡಿಸಲಾಗಿದೆ.
ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…